ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಚಾಮುಂಡಿ ಬೆಟ್ಟದ ೨ ಎಕರೆ ಪ್ರದೇಶದಲ್ಲಿದ್ದ ಗಿಡಗಂಟಿಗಳು, ಹುಲ್ಲು, ಕುರುಚಲು ಸುಟ್ಟು ಭಸ್ಮವಾಗಿದೆ. ಇನ್ನು ಮಾಹಿತಿ ತಿಳಿದ ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ.
ಸಂಜೆ ೬.೪೫ರ ಸಮಯದಲ್ಲಿ ಬೆಟ್ಟದ ಪಾದ ಮೆಟ್ಟಿಲು ಹತ್ತುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಕಿಡಿಗೇಡಿಗಳ್ಯಾರೋ ಬೆಟ್ಟ ಹತ್ತುವಾಗ ಬೆಟ್ಟದ ಮಧ್ಯ ಸ್ಥಳದಲ್ಲಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ಗಾಳಿಯಿಂದಾಗಿ ವೇಗವಾಗಿ ವ್ಯಾಪಿಸಿದೆ.
ಈ ಬೆಂಕಿ ಸುಮಾರು ೫೦ ಎಕರೆ ಪ್ರದೇಶ ವ್ಯಾಪಿಸಿದೆ. ಆದರೆ, ೨ ಎಕರೆಯಷ್ಟು ಅರಣ್ಯ ಮಾತ್ರ ನಾಶವಾಗಿದೆ. ಬೆಂಕಿ ಆವರಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗಳ ಕಾಲ ಬೆಂಕಿಯ ಉರಿ ಮತ್ತು ಹೊಗೆ ಇಡೀ ಬೆಟ್ಟವನ್ನು ಆವರಿಸಿದೆ. ಬೆಟ್ಟದ ಸಮೀಪದ ಜನರು, ಈ ಪ್ರಮಾಣದಲ್ಲಿ ಹೊಗೆಯೂ ಆವರಿಸಿಕೊಂಡಿರುವುದನ್ನು ಗಮನಿಸಿ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಮತ್ತು ಅರಣ್ಯ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯಾಚರಣೆ ಮಾಡಿದ್ದಾರೆ. ಸರಸ್ವತಿಪುರಂ, ಬನ್ನಿಮಂಟಪ, ಹೆಬ್ಬಾಳ ಠಾಣೆಗಳಿಂದ ಒಟ್ಟು ೬ ಅಗ್ನಿ ಶಾಮಕ ವಾಹನಗಳು ಮತ್ತು ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಸುಮಾರು ೩೦ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಸುಮಾರು ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ, ಬೆಂಕಿಯನ್ನು ಹತೋಟಿಗೆ ತಂದರು.
ಇನ್ನು ಸಂಬಂಧ ಪ್ರತಿಕ್ರಿಯಿಸಿರುವ ಆರ್ಎಫ್ಒ ಧನ್ಯಶ್ರೀ ಅವರು ‘ ಸುಮಾರು ಎರಡು ಎಕರೆಯಷ್ಟು ಅರಣ್ಯ ಪ್ರದೇಶ ನಾಶವಾಗಿದೆ. ಬೆಂಕಿಯನ್ನು ಅಗ್ನಿ ಶಾಮಕ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸೇರಿ ಆರಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು ಪ್ರತಿಕ್ರಿಯಿಸಿ ‘ ಸಂಜೆ ೬.೫೪ ರ ಸುಮಾರಿಗೆ ಬೆಂಕಿ ಹತ್ತಿಕೊಂಡಿದೆ. ದಾರಿಹೋಕರು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ವಾಹನಗಳು ಮಧ್ಯ ಭಾಗಕ್ಕೆ ಹೋಗಿ ಬೆಂಕಿ ಆರಿಸುವುದು ಕಷ್ಟವಾದರೂ ಸುಮಾರು ೨೩ಕ್ಕೂ ಹೆಚ್ಚು ನಮ್ಮ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ತಿಳಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…