ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಚಾಮುಂಡಿ ಬೆಟ್ಟದ ೨ ಎಕರೆ ಪ್ರದೇಶದಲ್ಲಿದ್ದ ಗಿಡಗಂಟಿಗಳು, ಹುಲ್ಲು, ಕುರುಚಲು ಸುಟ್ಟು ಭಸ್ಮವಾಗಿದೆ. ಇನ್ನು ಮಾಹಿತಿ ತಿಳಿದ ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ.
ಸಂಜೆ ೬.೪೫ರ ಸಮಯದಲ್ಲಿ ಬೆಟ್ಟದ ಪಾದ ಮೆಟ್ಟಿಲು ಹತ್ತುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಕಿಡಿಗೇಡಿಗಳ್ಯಾರೋ ಬೆಟ್ಟ ಹತ್ತುವಾಗ ಬೆಟ್ಟದ ಮಧ್ಯ ಸ್ಥಳದಲ್ಲಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ಗಾಳಿಯಿಂದಾಗಿ ವೇಗವಾಗಿ ವ್ಯಾಪಿಸಿದೆ.
ಈ ಬೆಂಕಿ ಸುಮಾರು ೫೦ ಎಕರೆ ಪ್ರದೇಶ ವ್ಯಾಪಿಸಿದೆ. ಆದರೆ, ೨ ಎಕರೆಯಷ್ಟು ಅರಣ್ಯ ಮಾತ್ರ ನಾಶವಾಗಿದೆ. ಬೆಂಕಿ ಆವರಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗಳ ಕಾಲ ಬೆಂಕಿಯ ಉರಿ ಮತ್ತು ಹೊಗೆ ಇಡೀ ಬೆಟ್ಟವನ್ನು ಆವರಿಸಿದೆ. ಬೆಟ್ಟದ ಸಮೀಪದ ಜನರು, ಈ ಪ್ರಮಾಣದಲ್ಲಿ ಹೊಗೆಯೂ ಆವರಿಸಿಕೊಂಡಿರುವುದನ್ನು ಗಮನಿಸಿ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಮತ್ತು ಅರಣ್ಯ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯಾಚರಣೆ ಮಾಡಿದ್ದಾರೆ. ಸರಸ್ವತಿಪುರಂ, ಬನ್ನಿಮಂಟಪ, ಹೆಬ್ಬಾಳ ಠಾಣೆಗಳಿಂದ ಒಟ್ಟು ೬ ಅಗ್ನಿ ಶಾಮಕ ವಾಹನಗಳು ಮತ್ತು ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಸುಮಾರು ೩೦ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಸುಮಾರು ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ, ಬೆಂಕಿಯನ್ನು ಹತೋಟಿಗೆ ತಂದರು.
ಇನ್ನು ಸಂಬಂಧ ಪ್ರತಿಕ್ರಿಯಿಸಿರುವ ಆರ್ಎಫ್ಒ ಧನ್ಯಶ್ರೀ ಅವರು ‘ ಸುಮಾರು ಎರಡು ಎಕರೆಯಷ್ಟು ಅರಣ್ಯ ಪ್ರದೇಶ ನಾಶವಾಗಿದೆ. ಬೆಂಕಿಯನ್ನು ಅಗ್ನಿ ಶಾಮಕ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸೇರಿ ಆರಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು ಪ್ರತಿಕ್ರಿಯಿಸಿ ‘ ಸಂಜೆ ೬.೫೪ ರ ಸುಮಾರಿಗೆ ಬೆಂಕಿ ಹತ್ತಿಕೊಂಡಿದೆ. ದಾರಿಹೋಕರು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ವಾಹನಗಳು ಮಧ್ಯ ಭಾಗಕ್ಕೆ ಹೋಗಿ ಬೆಂಕಿ ಆರಿಸುವುದು ಕಷ್ಟವಾದರೂ ಸುಮಾರು ೨೩ಕ್ಕೂ ಹೆಚ್ಚು ನಮ್ಮ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ತಿಳಿಸಿದರು.
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…