BREAKING NEWS

ಚಾಮುಂಡಿ ಬೆಟ್ಟಕ್ಕೆ ಬೆಂಕಿ: 9 ಎಕರೆ ಅರಣ್ಯ ಪ್ರದೇಶ ಭಸ್ಮ

ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಚಾಮುಂಡಿ ಬೆಟ್ಟದ ೨ ಎಕರೆ ಪ್ರದೇಶದಲ್ಲಿದ್ದ ಗಿಡಗಂಟಿಗಳು, ಹುಲ್ಲು, ಕುರುಚಲು ಸುಟ್ಟು ಭಸ್ಮವಾಗಿದೆ. ಇನ್ನು ಮಾಹಿತಿ ತಿಳಿದ ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ.

ಸಂಜೆ ೬.೪೫ರ ಸಮಯದಲ್ಲಿ ಬೆಟ್ಟದ ಪಾದ ಮೆಟ್ಟಿಲು ಹತ್ತುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಕಿಡಿಗೇಡಿಗಳ್ಯಾರೋ ಬೆಟ್ಟ ಹತ್ತುವಾಗ ಬೆಟ್ಟದ ಮಧ್ಯ ಸ್ಥಳದಲ್ಲಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ಗಾಳಿಯಿಂದಾಗಿ ವೇಗವಾಗಿ ವ್ಯಾಪಿಸಿದೆ.

ಈ ಬೆಂಕಿ ಸುಮಾರು ೫೦ ಎಕರೆ ಪ್ರದೇಶ ವ್ಯಾಪಿಸಿದೆ. ಆದರೆ, ೨ ಎಕರೆಯಷ್ಟು ಅರಣ್ಯ ಮಾತ್ರ ನಾಶವಾಗಿದೆ. ಬೆಂಕಿ ಆವರಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗಳ ಕಾಲ ಬೆಂಕಿಯ ಉರಿ ಮತ್ತು ಹೊಗೆ ಇಡೀ ಬೆಟ್ಟವನ್ನು ಆವರಿಸಿದೆ. ಬೆಟ್ಟದ ಸಮೀಪದ ಜನರು, ಈ ಪ್ರಮಾಣದಲ್ಲಿ ಹೊಗೆಯೂ ಆವರಿಸಿಕೊಂಡಿರುವುದನ್ನು ಗಮನಿಸಿ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಮತ್ತು ಅರಣ್ಯ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯಾಚರಣೆ ಮಾಡಿದ್ದಾರೆ. ಸರಸ್ವತಿಪುರಂ, ಬನ್ನಿಮಂಟಪ, ಹೆಬ್ಬಾಳ ಠಾಣೆಗಳಿಂದ ಒಟ್ಟು ೬ ಅಗ್ನಿ ಶಾಮಕ ವಾಹನಗಳು ಮತ್ತು ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಸುಮಾರು ೩೦ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಸುಮಾರು ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ, ಬೆಂಕಿಯನ್ನು ಹತೋಟಿಗೆ ತಂದರು.

ಇನ್ನು ಸಂಬಂಧ ಪ್ರತಿಕ್ರಿಯಿಸಿರುವ ಆರ್‌ಎಫ್‌ಒ ಧನ್ಯಶ್ರೀ ಅವರು ‘ ಸುಮಾರು ಎರಡು ಎಕರೆಯಷ್ಟು ಅರಣ್ಯ ಪ್ರದೇಶ ನಾಶವಾಗಿದೆ. ಬೆಂಕಿಯನ್ನು ಅಗ್ನಿ ಶಾಮಕ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸೇರಿ ಆರಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು ಪ್ರತಿಕ್ರಿಯಿಸಿ ‘ ಸಂಜೆ ೬.೫೪ ರ ಸುಮಾರಿಗೆ ಬೆಂಕಿ ಹತ್ತಿಕೊಂಡಿದೆ. ದಾರಿಹೋಕರು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ವಾಹನಗಳು ಮಧ್ಯ ಭಾಗಕ್ಕೆ ಹೋಗಿ ಬೆಂಕಿ ಆರಿಸುವುದು ಕಷ್ಟವಾದರೂ ಸುಮಾರು ೨೩ಕ್ಕೂ ಹೆಚ್ಚು ನಮ್ಮ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ತಿಳಿಸಿದರು.

andolanait

Recent Posts

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

48 mins ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

54 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

1 hour ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

1 hour ago

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

4 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

4 hours ago