BREAKING NEWS

ಕರಾವಳಿ ಮಲೆನಾಡು ವ್ಯಾಪ್ತಿಯಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್‌, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಗುರುವಾರ ರಾತ್ರಿ ಹಾಗೂ ಶುಕ್ರವಾರ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಲಬುರಗಿ ಜಿಲ್ಲೆಯ ಕಮಲಾಪುರ, ಯಡ್ರಾಮಿ, ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ 5 ಸೆಂ.ಮೀ, ಕಲಬುರಗಿಯ ಆಳಂದ, ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ 4 ಸೆಂ.ಮೀ ಮಳೆಯಾಗಿದೆ.

ರಾಯಚೂರಿನ ಗಬ್ಬೂರು, ವಿಜಯಪುರ, ಆಲಮಟ್ಟಿ, ಚಿಕ್ಕಮಗ ಳೂರು, ಬೀದರ್‌ನ ಹುಮನಾ ಬಾದ್‌, ಕಲಬುರಗಿಯ ಖಜೂರಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಧಾರವಾಡದ ಕುಂದಗೊಳ, ಯಾದಗಿರಿಯ ಕೆಂಬಾವಿ, ಚಿಕ್ಕಮಗಳೂರಿನ ಎನ್‌.ಆರ್‌.ಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

 

lokesh

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

9 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

10 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

10 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

10 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

10 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

10 hours ago