BREAKING NEWS

ʼಬಣ್ಣʼ ಬದಲಿಸಿದ ʼಚಂದನʼ ವಾಹಿನಿ !

ನವದೆಹಲಿ : ದೂರದರ್ಶನದ ಪ್ರಮುಖ ಲಾಂಛನದ ಬಣ್ಣವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು ಈ ಬಗ್ಗೆ ಎಲ್ಲೆಡೆ ವ್ಯಾಕ ಚರ್ಚೆ ಪ್ರಾರಂಭವಾಗಿದೆ.

ಡಿಡಿ ನ್ಯೂಸ್ನ ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಈ ಘೋಷಣೆ ಮಾಡಿದೆ.  “ನಮ್ಮ ಮೌಲ್ಯಗಳು ಒಂದೇ ಆಗಿದ್ದರೂ, ನಾವು ಈಗ ಹೊಸ ಅವತಾರದಲ್ಲಿ ಲಭ್ಯವಿದ್ದೇವೆ” ಹಿಂದೆಂದಿಗಿಂತಲೂ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ.. ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ!” ಎಂದು ತಿಳಿಸಿದೆ.

ಲಾಂಛನ ಬಣ್ಣ ಬದಲಾವಣೆ ಬಗ್ಗೆ ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವನ್ನು ರಾಜ್ಯಸಭಾ ಸದಸ್ಯ ಮತ್ತು ಪ್ರಸಾರ ಭಾರತಿ (ಡಿಡಿ, ಎಐಆರ್) ಮಾಜಿ ಸಿಇಒ ಜವಾಹರ್ ಸರ್ಕಾರ್ ಖಂಡಿಸಿದ್ದಾರೆ.

“ರಾಷ್ಟ್ರೀಯ ಪ್ರಸಾರಕ ದೂರದರ್ಶನವು ತನ್ನ ಐತಿಹಾಸಿಕ ಪ್ರಮುಖ ಲಾಂಛನವನ್ನು ಕೇಸರಿ ಬಣ್ಣದಲ್ಲಿ ಬದಲಾಗಿದೆ! ಅದರ ಮಾಜಿ ಸಿಇಒ ಆಗಿ, ನಾನು ಅದರ ಕೇಸರೀಕರಣವನ್ನು ಎಚ್ಚರಿಕೆಯಿಂದ ನೋಡುತ್ತಿದ್ದೇನೆ ಮತ್ತು “ಇದು ಇನ್ನು ಮುಂದೆ ಪ್ರಸಾರ ಭಾರತಿ ಅಲ್ಲ – ಇದು ಪ್ರಚಾರ ಭಾರತಿ!” ಎಂದು ಭಾವಿಸುತ್ತೇನೆ” ಎಂದು ಅವರು X ನಲ್ಲಿ ಬರೆದಿದ್ದಾರೆ.

2012 ರಿಂದ 2014 ರವರೆಗೆ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದ ಕಾಂಗ್ರೆಸ್ನ ಮನೀಶ್ ತಿವಾರಿ, ಲೋಗೋ ಬಣ್ಣ ಬದಲಾವಣೆಯು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ಸಂಸ್ಥೆಯ ಈ ನಡೆ “ಇದು ಕೇಸರಿಕರಣ ಮತ್ತು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನವಾಗಿದೆ.” ಎಂದು ಆರೋಪಿಸಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

10 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

10 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

10 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

11 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

11 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

11 hours ago