ನವದೆಹಲಿ : ದೂರದರ್ಶನದ ಪ್ರಮುಖ ಲಾಂಛನದ ಬಣ್ಣವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು ಈ ಬಗ್ಗೆ ಎಲ್ಲೆಡೆ ವ್ಯಾಕ ಚರ್ಚೆ ಪ್ರಾರಂಭವಾಗಿದೆ.
ಡಿಡಿ ನ್ಯೂಸ್ನ ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಈ ಘೋಷಣೆ ಮಾಡಿದೆ. “ನಮ್ಮ ಮೌಲ್ಯಗಳು ಒಂದೇ ಆಗಿದ್ದರೂ, ನಾವು ಈಗ ಹೊಸ ಅವತಾರದಲ್ಲಿ ಲಭ್ಯವಿದ್ದೇವೆ” ಹಿಂದೆಂದಿಗಿಂತಲೂ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ.. ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ!” ಎಂದು ತಿಳಿಸಿದೆ.
ಲಾಂಛನ ಬಣ್ಣ ಬದಲಾವಣೆ ಬಗ್ಗೆ ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವನ್ನು ರಾಜ್ಯಸಭಾ ಸದಸ್ಯ ಮತ್ತು ಪ್ರಸಾರ ಭಾರತಿ (ಡಿಡಿ, ಎಐಆರ್) ಮಾಜಿ ಸಿಇಒ ಜವಾಹರ್ ಸರ್ಕಾರ್ ಖಂಡಿಸಿದ್ದಾರೆ.
“ರಾಷ್ಟ್ರೀಯ ಪ್ರಸಾರಕ ದೂರದರ್ಶನವು ತನ್ನ ಐತಿಹಾಸಿಕ ಪ್ರಮುಖ ಲಾಂಛನವನ್ನು ಕೇಸರಿ ಬಣ್ಣದಲ್ಲಿ ಬದಲಾಗಿದೆ! ಅದರ ಮಾಜಿ ಸಿಇಒ ಆಗಿ, ನಾನು ಅದರ ಕೇಸರೀಕರಣವನ್ನು ಎಚ್ಚರಿಕೆಯಿಂದ ನೋಡುತ್ತಿದ್ದೇನೆ ಮತ್ತು “ಇದು ಇನ್ನು ಮುಂದೆ ಪ್ರಸಾರ ಭಾರತಿ ಅಲ್ಲ – ಇದು ಪ್ರಚಾರ ಭಾರತಿ!” ಎಂದು ಭಾವಿಸುತ್ತೇನೆ” ಎಂದು ಅವರು X ನಲ್ಲಿ ಬರೆದಿದ್ದಾರೆ.
2012 ರಿಂದ 2014 ರವರೆಗೆ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದ ಕಾಂಗ್ರೆಸ್ನ ಮನೀಶ್ ತಿವಾರಿ, ಲೋಗೋ ಬಣ್ಣ ಬದಲಾವಣೆಯು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಸಂಸ್ಥೆಯ ಈ ನಡೆ “ಇದು ಕೇಸರಿಕರಣ ಮತ್ತು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನವಾಗಿದೆ.” ಎಂದು ಆರೋಪಿಸಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…