BREAKING NEWS

ʼಬಣ್ಣʼ ಬದಲಿಸಿದ ʼಚಂದನʼ ವಾಹಿನಿ !

ನವದೆಹಲಿ : ದೂರದರ್ಶನದ ಪ್ರಮುಖ ಲಾಂಛನದ ಬಣ್ಣವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು ಈ ಬಗ್ಗೆ ಎಲ್ಲೆಡೆ ವ್ಯಾಕ ಚರ್ಚೆ ಪ್ರಾರಂಭವಾಗಿದೆ.

ಡಿಡಿ ನ್ಯೂಸ್ನ ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಈ ಘೋಷಣೆ ಮಾಡಿದೆ.  “ನಮ್ಮ ಮೌಲ್ಯಗಳು ಒಂದೇ ಆಗಿದ್ದರೂ, ನಾವು ಈಗ ಹೊಸ ಅವತಾರದಲ್ಲಿ ಲಭ್ಯವಿದ್ದೇವೆ” ಹಿಂದೆಂದಿಗಿಂತಲೂ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ.. ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ!” ಎಂದು ತಿಳಿಸಿದೆ.

ಲಾಂಛನ ಬಣ್ಣ ಬದಲಾವಣೆ ಬಗ್ಗೆ ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವನ್ನು ರಾಜ್ಯಸಭಾ ಸದಸ್ಯ ಮತ್ತು ಪ್ರಸಾರ ಭಾರತಿ (ಡಿಡಿ, ಎಐಆರ್) ಮಾಜಿ ಸಿಇಒ ಜವಾಹರ್ ಸರ್ಕಾರ್ ಖಂಡಿಸಿದ್ದಾರೆ.

“ರಾಷ್ಟ್ರೀಯ ಪ್ರಸಾರಕ ದೂರದರ್ಶನವು ತನ್ನ ಐತಿಹಾಸಿಕ ಪ್ರಮುಖ ಲಾಂಛನವನ್ನು ಕೇಸರಿ ಬಣ್ಣದಲ್ಲಿ ಬದಲಾಗಿದೆ! ಅದರ ಮಾಜಿ ಸಿಇಒ ಆಗಿ, ನಾನು ಅದರ ಕೇಸರೀಕರಣವನ್ನು ಎಚ್ಚರಿಕೆಯಿಂದ ನೋಡುತ್ತಿದ್ದೇನೆ ಮತ್ತು “ಇದು ಇನ್ನು ಮುಂದೆ ಪ್ರಸಾರ ಭಾರತಿ ಅಲ್ಲ – ಇದು ಪ್ರಚಾರ ಭಾರತಿ!” ಎಂದು ಭಾವಿಸುತ್ತೇನೆ” ಎಂದು ಅವರು X ನಲ್ಲಿ ಬರೆದಿದ್ದಾರೆ.

2012 ರಿಂದ 2014 ರವರೆಗೆ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದ ಕಾಂಗ್ರೆಸ್ನ ಮನೀಶ್ ತಿವಾರಿ, ಲೋಗೋ ಬಣ್ಣ ಬದಲಾವಣೆಯು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ಸಂಸ್ಥೆಯ ಈ ನಡೆ “ಇದು ಕೇಸರಿಕರಣ ಮತ್ತು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನವಾಗಿದೆ.” ಎಂದು ಆರೋಪಿಸಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

51 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

55 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago