BREAKING NEWS

‘ಚಂದ್ರಯಾನ- 3’ ಮತ್ತೊಂದು ಹೆಜ್ಜೆ: ಚಂದ್ರನ ಕಕ್ಷೆ ಸೇರ್ಪಡೆ ಯಶಸ್ವಿ

ನವದೆಹಲಿ : ದೇಶದ ಮಹತ್ವಾಕಾಂಕ್ಷೆಯ ‘ಚಂದ್ರಯಾನ- 3’ ಮತ್ತೊಂದು ಹೆಜ್ಜೆ ಕ್ರಮಿಸಿದ್ದು, ಚಂದ್ರನ ಅಂಗಳದಲ್ಲಿ ಕಾಲಿರಿಸುವ ಪ್ರಯತ್ನದಲ್ಲಿ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ.

ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಟ್ವೀಟ್ ಮೂಲಕ ತಿಳಿಸಿದೆ. ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನೌಕೆಯು, ಈಗ ತನ್ನ ಉದ್ದೇಶಿದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಮತ್ತೊಂದು ಹಂತವನ್ನು ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ. ಇದು ಇಸ್ರೋದ ಯೋಜನೆಯ ಮತ್ತೊಂದು ಯಶಸ್ಸಾಗಿದೆ.

ಬೆಂಗಳೂರಿನ ಐಎಸ್‌ಟಿಆರ್‌ಎಸಿಯ ಮಿಷನ್ ಆಪರೇಷನ್ ಕಾಂಪ್ಲೆಕ್ಸ್‌ನಿಂದ (ಎಂಓಎಕ್ಸ್) ಚಂದ್ರನಿಗೆ ಅತಿ ಸಮೀಪದ ಕಕ್ಷೆಯ ಭಾಗವಾದ ಪೆರಿಲೂನ್‌ನಿಂದ ರೆಟ್ರೋ ಬರ್ನಿಂಗ್ (ರಾಕೆಟ್‌ಗಳನ್ನು ಉಡಾವಣೆ ಮಾಡಿದ ದಿಕ್ಕಿನ ವಿರುದ್ಧ ಭಾಗದಿಂದ ರಾಕೆಟ್‌ ಉರಿಸುವುದು) ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಇಸ್ರೋ ಹೇಳಿದೆ.
ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ ಪ್ರಕ್ರಿಯೆಯನ್ನು ಆಗಸ್ಟ್ 6ರ ಭಾನುವಾರ ರಾತ್ರಿ 11 ಗಂಟೆ ಹಾಗೆ ನಿಗದಿಪಡಿಸಲಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಮಾಹಿತಿ ನೀಡಿದೆ.
ಸಂಜೆ 7 ಗಂಟೆ ಸುಮಾರಿಗೆ ನೌಕೆಯು ಚಂದ್ರನ ಕಕ್ಷೆ ಪ್ರವೇಶಿಸಲಿದೆ ಎಂದು ಇದಕ್ಕೂ ಮುನ್ನ ಇಸ್ರೋ ಮಾಹಿತಿ ನೀಡಿತ್ತು. ಲೂನಾರ್ ಆರ್ಬಿಟ್ ಇನ್ಸರ್ಷನ್ (ಎಲ್‌ಒಐ) ಅಥವಾ ಚಂದ್ರನ ಕಕ್ಷೆ ಸೇರ್ಪಡೆ ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರಯಾನದ ಎಲ್ಲಾ ವ್ಯವಸ್ಥೆಗಳೂ ಆರೋಗ್ಯಪೂರ್ಣವಾಗಿವೆ ಎಂಬ ಸಂತಸದ ಸುದ್ದಿಯನ್ನು ಇಸ್ರೋ ಹಂಚಿಕೊಂಡಿದೆ.
andolanait

Recent Posts

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

15 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

28 mins ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

36 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

53 mins ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

1 hour ago

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…

1 hour ago