BREAKING NEWS

‘ಚಂದ್ರಯಾನ- 3’ ಮತ್ತೊಂದು ಹೆಜ್ಜೆ: ಚಂದ್ರನ ಕಕ್ಷೆ ಸೇರ್ಪಡೆ ಯಶಸ್ವಿ

ನವದೆಹಲಿ : ದೇಶದ ಮಹತ್ವಾಕಾಂಕ್ಷೆಯ ‘ಚಂದ್ರಯಾನ- 3’ ಮತ್ತೊಂದು ಹೆಜ್ಜೆ ಕ್ರಮಿಸಿದ್ದು, ಚಂದ್ರನ ಅಂಗಳದಲ್ಲಿ ಕಾಲಿರಿಸುವ ಪ್ರಯತ್ನದಲ್ಲಿ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ.

ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಟ್ವೀಟ್ ಮೂಲಕ ತಿಳಿಸಿದೆ. ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನೌಕೆಯು, ಈಗ ತನ್ನ ಉದ್ದೇಶಿದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಮತ್ತೊಂದು ಹಂತವನ್ನು ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ. ಇದು ಇಸ್ರೋದ ಯೋಜನೆಯ ಮತ್ತೊಂದು ಯಶಸ್ಸಾಗಿದೆ.

ಬೆಂಗಳೂರಿನ ಐಎಸ್‌ಟಿಆರ್‌ಎಸಿಯ ಮಿಷನ್ ಆಪರೇಷನ್ ಕಾಂಪ್ಲೆಕ್ಸ್‌ನಿಂದ (ಎಂಓಎಕ್ಸ್) ಚಂದ್ರನಿಗೆ ಅತಿ ಸಮೀಪದ ಕಕ್ಷೆಯ ಭಾಗವಾದ ಪೆರಿಲೂನ್‌ನಿಂದ ರೆಟ್ರೋ ಬರ್ನಿಂಗ್ (ರಾಕೆಟ್‌ಗಳನ್ನು ಉಡಾವಣೆ ಮಾಡಿದ ದಿಕ್ಕಿನ ವಿರುದ್ಧ ಭಾಗದಿಂದ ರಾಕೆಟ್‌ ಉರಿಸುವುದು) ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಇಸ್ರೋ ಹೇಳಿದೆ.
ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ ಪ್ರಕ್ರಿಯೆಯನ್ನು ಆಗಸ್ಟ್ 6ರ ಭಾನುವಾರ ರಾತ್ರಿ 11 ಗಂಟೆ ಹಾಗೆ ನಿಗದಿಪಡಿಸಲಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಮಾಹಿತಿ ನೀಡಿದೆ.
ಸಂಜೆ 7 ಗಂಟೆ ಸುಮಾರಿಗೆ ನೌಕೆಯು ಚಂದ್ರನ ಕಕ್ಷೆ ಪ್ರವೇಶಿಸಲಿದೆ ಎಂದು ಇದಕ್ಕೂ ಮುನ್ನ ಇಸ್ರೋ ಮಾಹಿತಿ ನೀಡಿತ್ತು. ಲೂನಾರ್ ಆರ್ಬಿಟ್ ಇನ್ಸರ್ಷನ್ (ಎಲ್‌ಒಐ) ಅಥವಾ ಚಂದ್ರನ ಕಕ್ಷೆ ಸೇರ್ಪಡೆ ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರಯಾನದ ಎಲ್ಲಾ ವ್ಯವಸ್ಥೆಗಳೂ ಆರೋಗ್ಯಪೂರ್ಣವಾಗಿವೆ ಎಂಬ ಸಂತಸದ ಸುದ್ದಿಯನ್ನು ಇಸ್ರೋ ಹಂಚಿಕೊಂಡಿದೆ.
andolanait

Recent Posts

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

52 mins ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

1 hour ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

2 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

2 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

3 hours ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

6 hours ago