BREAKING NEWS

ಚಂದ್ರಯಾನ – 3 : ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿ

ಬೆಂಗಳೂರು : ಚಂದ್ರಯಾನ-3 ಮಿಷನ್‌ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್‌ 23 ರಂದು ಲ್ಯಾಂಡರ್‌ ವಿಕ್ರಮ್‌ ಚಂದ್ರನ ಅಂಗಳಕ್ಕೆ ಕಾಲಿಡಲಿದೆ.

ಆಗಸ್ಟ್‌ 18ರಂದು ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯಶಸ್ವಿಗೊಳಿಸಿತ್ತು. ಲ್ಯಾಂಡರ್‌ ಮಾಡ್ಯೂಲ್‌ ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಇಳಿಸಿದ ಡಿಬೂಸ್ಟಿಂಗ್ ಕಾರ್ಯಾಚರಣೆಗೆ ಯಶಸ್ವಿಯಾಗಿ ಒಳಗಾಗಿತ್ತು. ಹಾಗೆಯೇ 2ನೇ ಹಾಗೂ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಲ್ಯಾಂಡರ್‌ ಮಾಡ್ಯೂಲ್‌ ಅನ್ನು ಕಕ್ಷೆಯನ್ನು 25 ಕಿಮೀ x 134 ಕಿಮೀಗೆ ಇಳಿಸಿದೆ. ಮುಂದಿನ ಹಂತದಲ್ಲಿ ಲ್ಯಾಂಡರ್‌ನ ಆಂತರಿಕ ತಪಾಸಣೆ ನಡೆಯಲಿದೆ. ಆಗಸ್ಟ್‌ 23 ರಂದು ಸಾಫ್ಟ್‌ ಲ್ಯಾಂಡಿಂಗ್‌ ಮಾಡುವ ಪ್ರಯತ್ನ ನಡೆದಿದೆ ಎಂದು ಇಸ್ರೋ ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಆಗಸ್ಟ್‌ 17ರ ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್‌ ಮ್ಯಾಡ್ಯೂಲ್‌ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಅದಾದ 1 ದಿನಗಳ ಬಳಿಕ ಮೊದಲ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಇಸ್ರೋ ಯಶಸ್ವಿಗೊಳಿಸಿತ್ತು. ಇದೀಗ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಗೊಂಡಿದ್ದು, ಮುಂದಿನ ಹಂತವಾಗಿ ಚಂದ್ರನ ಅಂಗಳಕ್ಕಿಳಿಯಲು ಇಸ್ರೋ ಎದುರು ನೋಡುತ್ತಿದೆ.

ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ-3 ನೌಕೆಯು, ಆ. 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಮೂರು ಕಕ್ಷೆಗಳನ್ನು ದಾಟಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಸನಿಹ ತಲುಪಿತ್ತು.

lokesh

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

8 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

8 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

8 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

10 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

11 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago