ಬೆಂಗಳೂರು : ಚಂದ್ರಯಾನ-3 ಮಿಷನ್ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ 23 ರಂದು ಲ್ಯಾಂಡರ್ ವಿಕ್ರಮ್ ಚಂದ್ರನ ಅಂಗಳಕ್ಕೆ ಕಾಲಿಡಲಿದೆ.
ಆಗಸ್ಟ್ 18ರಂದು ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯಶಸ್ವಿಗೊಳಿಸಿತ್ತು. ಲ್ಯಾಂಡರ್ ಮಾಡ್ಯೂಲ್ ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಇಳಿಸಿದ ಡಿಬೂಸ್ಟಿಂಗ್ ಕಾರ್ಯಾಚರಣೆಗೆ ಯಶಸ್ವಿಯಾಗಿ ಒಳಗಾಗಿತ್ತು. ಹಾಗೆಯೇ 2ನೇ ಹಾಗೂ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಲ್ಯಾಂಡರ್ ಮಾಡ್ಯೂಲ್ ಅನ್ನು ಕಕ್ಷೆಯನ್ನು 25 ಕಿಮೀ x 134 ಕಿಮೀಗೆ ಇಳಿಸಿದೆ. ಮುಂದಿನ ಹಂತದಲ್ಲಿ ಲ್ಯಾಂಡರ್ನ ಆಂತರಿಕ ತಪಾಸಣೆ ನಡೆಯಲಿದೆ. ಆಗಸ್ಟ್ 23 ರಂದು ಸಾಫ್ಟ್ ಲ್ಯಾಂಡಿಂಗ್ ಮಾಡುವ ಪ್ರಯತ್ನ ನಡೆದಿದೆ ಎಂದು ಇಸ್ರೋ ತನ್ನ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಆಗಸ್ಟ್ 17ರ ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್ನಿಂದ ಲ್ಯಾಂಡರ್ ಮ್ಯಾಡ್ಯೂಲ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಅದಾದ 1 ದಿನಗಳ ಬಳಿಕ ಮೊದಲ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಇಸ್ರೋ ಯಶಸ್ವಿಗೊಳಿಸಿತ್ತು. ಇದೀಗ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಗೊಂಡಿದ್ದು, ಮುಂದಿನ ಹಂತವಾಗಿ ಚಂದ್ರನ ಅಂಗಳಕ್ಕಿಳಿಯಲು ಇಸ್ರೋ ಎದುರು ನೋಡುತ್ತಿದೆ.
ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ-3 ನೌಕೆಯು, ಆ. 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಮೂರು ಕಕ್ಷೆಗಳನ್ನು ದಾಟಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಸನಿಹ ತಲುಪಿತ್ತು.
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…