ಬೆಂಗಳೂರು : ಚಂದ್ರಯಾನ-3 ಮಿಷನ್ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ 23 ರಂದು ಲ್ಯಾಂಡರ್ ವಿಕ್ರಮ್ ಚಂದ್ರನ ಅಂಗಳಕ್ಕೆ ಕಾಲಿಡಲಿದೆ.
ಆಗಸ್ಟ್ 18ರಂದು ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯಶಸ್ವಿಗೊಳಿಸಿತ್ತು. ಲ್ಯಾಂಡರ್ ಮಾಡ್ಯೂಲ್ ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಇಳಿಸಿದ ಡಿಬೂಸ್ಟಿಂಗ್ ಕಾರ್ಯಾಚರಣೆಗೆ ಯಶಸ್ವಿಯಾಗಿ ಒಳಗಾಗಿತ್ತು. ಹಾಗೆಯೇ 2ನೇ ಹಾಗೂ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಲ್ಯಾಂಡರ್ ಮಾಡ್ಯೂಲ್ ಅನ್ನು ಕಕ್ಷೆಯನ್ನು 25 ಕಿಮೀ x 134 ಕಿಮೀಗೆ ಇಳಿಸಿದೆ. ಮುಂದಿನ ಹಂತದಲ್ಲಿ ಲ್ಯಾಂಡರ್ನ ಆಂತರಿಕ ತಪಾಸಣೆ ನಡೆಯಲಿದೆ. ಆಗಸ್ಟ್ 23 ರಂದು ಸಾಫ್ಟ್ ಲ್ಯಾಂಡಿಂಗ್ ಮಾಡುವ ಪ್ರಯತ್ನ ನಡೆದಿದೆ ಎಂದು ಇಸ್ರೋ ತನ್ನ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಆಗಸ್ಟ್ 17ರ ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್ನಿಂದ ಲ್ಯಾಂಡರ್ ಮ್ಯಾಡ್ಯೂಲ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಅದಾದ 1 ದಿನಗಳ ಬಳಿಕ ಮೊದಲ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಇಸ್ರೋ ಯಶಸ್ವಿಗೊಳಿಸಿತ್ತು. ಇದೀಗ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಗೊಂಡಿದ್ದು, ಮುಂದಿನ ಹಂತವಾಗಿ ಚಂದ್ರನ ಅಂಗಳಕ್ಕಿಳಿಯಲು ಇಸ್ರೋ ಎದುರು ನೋಡುತ್ತಿದೆ.
ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ-3 ನೌಕೆಯು, ಆ. 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಮೂರು ಕಕ್ಷೆಗಳನ್ನು ದಾಟಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಸನಿಹ ತಲುಪಿತ್ತು.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…