BREAKING NEWS

ಚಂದ್ರಯಾನ – 3 : ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿ

ಬೆಂಗಳೂರು : ಚಂದ್ರಯಾನ-3 ಮಿಷನ್‌ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್‌ 23 ರಂದು ಲ್ಯಾಂಡರ್‌ ವಿಕ್ರಮ್‌ ಚಂದ್ರನ ಅಂಗಳಕ್ಕೆ ಕಾಲಿಡಲಿದೆ.

ಆಗಸ್ಟ್‌ 18ರಂದು ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯಶಸ್ವಿಗೊಳಿಸಿತ್ತು. ಲ್ಯಾಂಡರ್‌ ಮಾಡ್ಯೂಲ್‌ ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಇಳಿಸಿದ ಡಿಬೂಸ್ಟಿಂಗ್ ಕಾರ್ಯಾಚರಣೆಗೆ ಯಶಸ್ವಿಯಾಗಿ ಒಳಗಾಗಿತ್ತು. ಹಾಗೆಯೇ 2ನೇ ಹಾಗೂ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಲ್ಯಾಂಡರ್‌ ಮಾಡ್ಯೂಲ್‌ ಅನ್ನು ಕಕ್ಷೆಯನ್ನು 25 ಕಿಮೀ x 134 ಕಿಮೀಗೆ ಇಳಿಸಿದೆ. ಮುಂದಿನ ಹಂತದಲ್ಲಿ ಲ್ಯಾಂಡರ್‌ನ ಆಂತರಿಕ ತಪಾಸಣೆ ನಡೆಯಲಿದೆ. ಆಗಸ್ಟ್‌ 23 ರಂದು ಸಾಫ್ಟ್‌ ಲ್ಯಾಂಡಿಂಗ್‌ ಮಾಡುವ ಪ್ರಯತ್ನ ನಡೆದಿದೆ ಎಂದು ಇಸ್ರೋ ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಆಗಸ್ಟ್‌ 17ರ ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್‌ ಮ್ಯಾಡ್ಯೂಲ್‌ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಅದಾದ 1 ದಿನಗಳ ಬಳಿಕ ಮೊದಲ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಇಸ್ರೋ ಯಶಸ್ವಿಗೊಳಿಸಿತ್ತು. ಇದೀಗ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಗೊಂಡಿದ್ದು, ಮುಂದಿನ ಹಂತವಾಗಿ ಚಂದ್ರನ ಅಂಗಳಕ್ಕಿಳಿಯಲು ಇಸ್ರೋ ಎದುರು ನೋಡುತ್ತಿದೆ.

ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ-3 ನೌಕೆಯು, ಆ. 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಮೂರು ಕಕ್ಷೆಗಳನ್ನು ದಾಟಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಸನಿಹ ತಲುಪಿತ್ತು.

lokesh

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

1 hour ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago