BREAKING NEWS

ಚಂದ್ರಯಾನ-3: ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದ ಚಂದ್ರನ ಮೇಲ್ಮೈ ವಿಡಿಯೋ ಹಂಚಿಕೊಂಡ ಇಸ್ರೋ!

ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ.

ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ ತನಗಾಗಿ ಸರಿಯಾದ ಮತ್ತು ಸಮತಟ್ಟಾದ ಲ್ಯಾಂಡಿಂಗ್ ಸ್ಥಳವನ್ನು ಕಂಡುಕೊಳ್ಳಲು ಇದನ್ನು ಸ್ಥಾಪಿಸಲಾಗಿದೆ. ಈ ಕ್ಯಾಮೆರಾದ ಸಹಾಯದಿಂದ ವಿಕ್ರಮ್ ಲ್ಯಾಂಡರ್ ಯಾವುದೇ ಉಬ್ಬು ಪ್ರದೇಶಕ್ಕೆ ಇಳಿಯುತ್ತಿಲ್ಲ ಎಂಬುದನ್ನು ನೋಡಬಹುದು.

ಲ್ಯಾಂಡಿಂಗ್‌ಗೂ ಮೊದಲು ಈ ಕ್ಯಾಮೆರಾವನ್ನು ಮತ್ತೆ ಆನ್ ಮಾಡಬಹುದು. ಏಕೆಂದರೆ ಈಗ ಬಂದಿರುವ ಚಿತ್ರವನ್ನು ನೋಡಿದರೆ ಈ ಕ್ಯಾಮೆರಾವನ್ನು ಪ್ರಯೋಗಕ್ಕಾಗಿ ಆನ್ ಮಾಡಲಾಗಿದೆ ಎಂದು ತೋರುತ್ತದೆ. ಇದರಿಂದ ಅದು ಎಷ್ಟು ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಚಿತ್ರಗಳು ಅಥವಾ ವೀಡಿಯೊಗಳಿಂದ ತಿಳಿಯಬಹುದು. ಈ ಸಂವೇದಕವನ್ನು ಚಂದ್ರಯಾನ-2 ರಲ್ಲೂ ಬಳಸಲಾಗಿತ್ತು.

LPDC ಯ ಕೆಲಸವೆಂದರೆ ವಿಕ್ರಮ್‌ಗೆ ಸರಿಯಾದ ಲ್ಯಾಂಡಿಂಗ್ ಸ್ಥಳವನ್ನು ಕಂಡುಹಿಡಿಯುವುದು. ಲ್ಯಾಂಡರ್ ಅಪಾಯ ಪತ್ತೆ ಮತ್ತು ತಪ್ಪಿಸುವ ಕ್ಯಾಮರಾ (LHDAC), ಲೇಸರ್ ಆಲ್ಟಿಮೀಟರ್ (LASA), ಲೇಸರ್ ಡಾಪ್ಲರ್ ವೆಲಾಸಿಟಿಮೀಟರ್ (LDV) ಮತ್ತು ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾ (LHVC) ಈ ಪೇಲೋಡ್‌ನೊಂದಿಗೆ ಒಟ್ಟಿಗೆ ಕೆಲಸ ಮಾಡುತ್ತದೆ. ಇದರಿಂದ ಲ್ಯಾಂಡರ್ ಅನ್ನು ಸುರಕ್ಷಿತ ಮೇಲ್ಮೈಯಲ್ಲಿ ಇಳಿಸಬಹುದು.

ಯಾವಾಗ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತದೆಯೋ ಆ ಸಮಯದಲ್ಲಿ ಅದರ ವೇಗ ಸೆಕೆಂಡಿಗೆ 2 ಮೀಟರ್ ಆಗಿರುತ್ತದೆ. ಆದರೆ ಸಮತಲ ವೇಗವು ಸೆಕೆಂಡಿಗೆ 0.5 ಮೀಟರ್ ಆಗಿರುತ್ತದೆ. ವಿಕ್ರಮ್ ಲ್ಯಾಂಡರ್ 12 ಡಿಗ್ರಿ ಇಳಿಜಾರಿನಲ್ಲಿ ಇಳಿಯಬಹುದು. ಈ ಎಲ್ಲಾ ಉಪಕರಣಗಳು ಈ ವೇಗ, ದಿಕ್ಕು ಮತ್ತು ಸಮತಟ್ಟಾದ ನೆಲವನ್ನು ಕಂಡುಹಿಡಿಯಲು ವಿಕ್ರಮ್ ಲ್ಯಾಂಡರ್‌ಗೆ ಸಹಾಯ ಮಾಡುತ್ತವೆ. ಈ ಎಲ್ಲಾ ಉಪಕರಣಗಳನ್ನು ಲ್ಯಾಂಡಿಂಗ್ ಮೊದಲು ಸುಮಾರು 500 ಮೀಟರ್ ಇರುವಾಗಲೇ ಸಕ್ರಿಯಗೊಳಿಸಲಾಗುತ್ತದೆ.

andolanait

Recent Posts

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

37 mins ago

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

57 mins ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

1 hour ago

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

2 hours ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

3 hours ago

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

3 hours ago