BREAKING NEWS

ಚಂದ್ರಯಾನ-3: ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದ ಚಂದ್ರನ ಮೇಲ್ಮೈ ವಿಡಿಯೋ ಹಂಚಿಕೊಂಡ ಇಸ್ರೋ!

ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ.

ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ ತನಗಾಗಿ ಸರಿಯಾದ ಮತ್ತು ಸಮತಟ್ಟಾದ ಲ್ಯಾಂಡಿಂಗ್ ಸ್ಥಳವನ್ನು ಕಂಡುಕೊಳ್ಳಲು ಇದನ್ನು ಸ್ಥಾಪಿಸಲಾಗಿದೆ. ಈ ಕ್ಯಾಮೆರಾದ ಸಹಾಯದಿಂದ ವಿಕ್ರಮ್ ಲ್ಯಾಂಡರ್ ಯಾವುದೇ ಉಬ್ಬು ಪ್ರದೇಶಕ್ಕೆ ಇಳಿಯುತ್ತಿಲ್ಲ ಎಂಬುದನ್ನು ನೋಡಬಹುದು.

ಲ್ಯಾಂಡಿಂಗ್‌ಗೂ ಮೊದಲು ಈ ಕ್ಯಾಮೆರಾವನ್ನು ಮತ್ತೆ ಆನ್ ಮಾಡಬಹುದು. ಏಕೆಂದರೆ ಈಗ ಬಂದಿರುವ ಚಿತ್ರವನ್ನು ನೋಡಿದರೆ ಈ ಕ್ಯಾಮೆರಾವನ್ನು ಪ್ರಯೋಗಕ್ಕಾಗಿ ಆನ್ ಮಾಡಲಾಗಿದೆ ಎಂದು ತೋರುತ್ತದೆ. ಇದರಿಂದ ಅದು ಎಷ್ಟು ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಚಿತ್ರಗಳು ಅಥವಾ ವೀಡಿಯೊಗಳಿಂದ ತಿಳಿಯಬಹುದು. ಈ ಸಂವೇದಕವನ್ನು ಚಂದ್ರಯಾನ-2 ರಲ್ಲೂ ಬಳಸಲಾಗಿತ್ತು.

LPDC ಯ ಕೆಲಸವೆಂದರೆ ವಿಕ್ರಮ್‌ಗೆ ಸರಿಯಾದ ಲ್ಯಾಂಡಿಂಗ್ ಸ್ಥಳವನ್ನು ಕಂಡುಹಿಡಿಯುವುದು. ಲ್ಯಾಂಡರ್ ಅಪಾಯ ಪತ್ತೆ ಮತ್ತು ತಪ್ಪಿಸುವ ಕ್ಯಾಮರಾ (LHDAC), ಲೇಸರ್ ಆಲ್ಟಿಮೀಟರ್ (LASA), ಲೇಸರ್ ಡಾಪ್ಲರ್ ವೆಲಾಸಿಟಿಮೀಟರ್ (LDV) ಮತ್ತು ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾ (LHVC) ಈ ಪೇಲೋಡ್‌ನೊಂದಿಗೆ ಒಟ್ಟಿಗೆ ಕೆಲಸ ಮಾಡುತ್ತದೆ. ಇದರಿಂದ ಲ್ಯಾಂಡರ್ ಅನ್ನು ಸುರಕ್ಷಿತ ಮೇಲ್ಮೈಯಲ್ಲಿ ಇಳಿಸಬಹುದು.

ಯಾವಾಗ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತದೆಯೋ ಆ ಸಮಯದಲ್ಲಿ ಅದರ ವೇಗ ಸೆಕೆಂಡಿಗೆ 2 ಮೀಟರ್ ಆಗಿರುತ್ತದೆ. ಆದರೆ ಸಮತಲ ವೇಗವು ಸೆಕೆಂಡಿಗೆ 0.5 ಮೀಟರ್ ಆಗಿರುತ್ತದೆ. ವಿಕ್ರಮ್ ಲ್ಯಾಂಡರ್ 12 ಡಿಗ್ರಿ ಇಳಿಜಾರಿನಲ್ಲಿ ಇಳಿಯಬಹುದು. ಈ ಎಲ್ಲಾ ಉಪಕರಣಗಳು ಈ ವೇಗ, ದಿಕ್ಕು ಮತ್ತು ಸಮತಟ್ಟಾದ ನೆಲವನ್ನು ಕಂಡುಹಿಡಿಯಲು ವಿಕ್ರಮ್ ಲ್ಯಾಂಡರ್‌ಗೆ ಸಹಾಯ ಮಾಡುತ್ತವೆ. ಈ ಎಲ್ಲಾ ಉಪಕರಣಗಳನ್ನು ಲ್ಯಾಂಡಿಂಗ್ ಮೊದಲು ಸುಮಾರು 500 ಮೀಟರ್ ಇರುವಾಗಲೇ ಸಕ್ರಿಯಗೊಳಿಸಲಾಗುತ್ತದೆ.

andolanait

Recent Posts

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

15 mins ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

50 mins ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

4 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

5 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

6 hours ago