BREAKING NEWS

ಚಂದ್ರಯಾನ-3: ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದ ಚಂದ್ರನ ಮೇಲ್ಮೈ ವಿಡಿಯೋ ಹಂಚಿಕೊಂಡ ಇಸ್ರೋ!

ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ.

ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ ತನಗಾಗಿ ಸರಿಯಾದ ಮತ್ತು ಸಮತಟ್ಟಾದ ಲ್ಯಾಂಡಿಂಗ್ ಸ್ಥಳವನ್ನು ಕಂಡುಕೊಳ್ಳಲು ಇದನ್ನು ಸ್ಥಾಪಿಸಲಾಗಿದೆ. ಈ ಕ್ಯಾಮೆರಾದ ಸಹಾಯದಿಂದ ವಿಕ್ರಮ್ ಲ್ಯಾಂಡರ್ ಯಾವುದೇ ಉಬ್ಬು ಪ್ರದೇಶಕ್ಕೆ ಇಳಿಯುತ್ತಿಲ್ಲ ಎಂಬುದನ್ನು ನೋಡಬಹುದು.

ಲ್ಯಾಂಡಿಂಗ್‌ಗೂ ಮೊದಲು ಈ ಕ್ಯಾಮೆರಾವನ್ನು ಮತ್ತೆ ಆನ್ ಮಾಡಬಹುದು. ಏಕೆಂದರೆ ಈಗ ಬಂದಿರುವ ಚಿತ್ರವನ್ನು ನೋಡಿದರೆ ಈ ಕ್ಯಾಮೆರಾವನ್ನು ಪ್ರಯೋಗಕ್ಕಾಗಿ ಆನ್ ಮಾಡಲಾಗಿದೆ ಎಂದು ತೋರುತ್ತದೆ. ಇದರಿಂದ ಅದು ಎಷ್ಟು ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಚಿತ್ರಗಳು ಅಥವಾ ವೀಡಿಯೊಗಳಿಂದ ತಿಳಿಯಬಹುದು. ಈ ಸಂವೇದಕವನ್ನು ಚಂದ್ರಯಾನ-2 ರಲ್ಲೂ ಬಳಸಲಾಗಿತ್ತು.

LPDC ಯ ಕೆಲಸವೆಂದರೆ ವಿಕ್ರಮ್‌ಗೆ ಸರಿಯಾದ ಲ್ಯಾಂಡಿಂಗ್ ಸ್ಥಳವನ್ನು ಕಂಡುಹಿಡಿಯುವುದು. ಲ್ಯಾಂಡರ್ ಅಪಾಯ ಪತ್ತೆ ಮತ್ತು ತಪ್ಪಿಸುವ ಕ್ಯಾಮರಾ (LHDAC), ಲೇಸರ್ ಆಲ್ಟಿಮೀಟರ್ (LASA), ಲೇಸರ್ ಡಾಪ್ಲರ್ ವೆಲಾಸಿಟಿಮೀಟರ್ (LDV) ಮತ್ತು ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾ (LHVC) ಈ ಪೇಲೋಡ್‌ನೊಂದಿಗೆ ಒಟ್ಟಿಗೆ ಕೆಲಸ ಮಾಡುತ್ತದೆ. ಇದರಿಂದ ಲ್ಯಾಂಡರ್ ಅನ್ನು ಸುರಕ್ಷಿತ ಮೇಲ್ಮೈಯಲ್ಲಿ ಇಳಿಸಬಹುದು.

ಯಾವಾಗ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತದೆಯೋ ಆ ಸಮಯದಲ್ಲಿ ಅದರ ವೇಗ ಸೆಕೆಂಡಿಗೆ 2 ಮೀಟರ್ ಆಗಿರುತ್ತದೆ. ಆದರೆ ಸಮತಲ ವೇಗವು ಸೆಕೆಂಡಿಗೆ 0.5 ಮೀಟರ್ ಆಗಿರುತ್ತದೆ. ವಿಕ್ರಮ್ ಲ್ಯಾಂಡರ್ 12 ಡಿಗ್ರಿ ಇಳಿಜಾರಿನಲ್ಲಿ ಇಳಿಯಬಹುದು. ಈ ಎಲ್ಲಾ ಉಪಕರಣಗಳು ಈ ವೇಗ, ದಿಕ್ಕು ಮತ್ತು ಸಮತಟ್ಟಾದ ನೆಲವನ್ನು ಕಂಡುಹಿಡಿಯಲು ವಿಕ್ರಮ್ ಲ್ಯಾಂಡರ್‌ಗೆ ಸಹಾಯ ಮಾಡುತ್ತವೆ. ಈ ಎಲ್ಲಾ ಉಪಕರಣಗಳನ್ನು ಲ್ಯಾಂಡಿಂಗ್ ಮೊದಲು ಸುಮಾರು 500 ಮೀಟರ್ ಇರುವಾಗಲೇ ಸಕ್ರಿಯಗೊಳಿಸಲಾಗುತ್ತದೆ.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

13 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

13 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

18 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago