BREAKING NEWS

ಭೂಮಿಯ ಕಕ್ಷೆ ತೊರೆದ ಚಂದ್ರಯಾನ-3 ನೌಕೆ : ಚಂದ್ರನತ್ತ ಪಯಣ

ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ.

ಈ ಬಗ್ಗೆ ಸ್ವತಃ ಇಸ್ರೋ ಮಾಹಿತಿ ನೀಡಿದ್ದು, ಚಂದ್ರಯಾನ–3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್‌ ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಚಂದ್ರಯಾನ–3 ಬಾಹ್ಯಾಕಾಶ ನೌಕೆ ಭೂಮಿಯ ಸುತ್ತಲಿನ ಕಕ್ಷೆಯನ್ನು ಪೂರ್ಣಗೊಳಿಸಿದ್ದು, ಚಂದ್ರನ ಕಕ್ಷೆಯತ್ತ ಸಾಗಿದೆ. ಇದೀಗ ಲೂನಾರ್ ಟ್ರಾನ್ಸ್‌ಫರ್‌ ಟ್ರಾಜೆಕ್ಟರಿ ಪಥದಲ್ಲಿ ನೌಕೆ ಸಾಗುತ್ತಿದೆ ಎಂದು ಇಸ್ರೊ ತಿಳಿಸಿದೆ.

ಸೋಮವಾರ ಮಧ್ಯರಾತ್ರಿ ಭೂಮಿಯ ಕಕ್ಷೆಯಿಂದ ಬೇರ್ಪಟ್ಟ ನೌಕೆ ಚಂದ್ರನೆಡೆಗೆ ಸಾಗಿದ್ದು, ನೌಕೆ ಚಂದ್ರನತ್ತ ಆಗಮಿಸುತ್ತಿದ್ದಂತೆ ಲೂನಾರ್‌–ಆರ್ಬಿಟ್‌ ಇನ್‌ರ್ಸಶನ್‌ ಕಾರ್ಯ ಪ್ರಾರಂಭವಾಗುತ್ತದೆ. ಆಗಸ್ಟ್‌ 5ಕ್ಕೆ ಎಲ್‌ಓಐ ಮಾಡಲು ಯೋಜಿಸಲಾಗಿದೆ. ಆಗಸ್ಟ್‌ 17ರಂದು ಪ್ಯೊಪಲ್ಷನ್‌ ಮಾಡ್ಯೂಲ್‌ ಮತ್ತು ಲ್ಯಾಂಡರ್ ಮಾಡ್ಯೂಲ್‌ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್‌ 23ರ ಸಂಜೆ 5.47ಕ್ಕೆ ಲ್ಯಾಂಡರ್‌ ಅನ್ನು ಸುರಕ್ಷಿತವಾಗಿ ಚಂದ್ರನ ಮೇಲೆ ಲ್ಯಾಂಡ್‌ ಮಾಡಲಾಗುತ್ತದೆ ಎಂದು ಇಸ್ರೋ ತಿಳಿಸಿದೆ.

ಸೋಮವಾರ ನಸುಕಿನ 12 ಗಂಟೆಯಿಂದ 12.30ರ ನಡುವೆ ಚಂದ್ರನ ಕಕ್ಷೆಗೆ ಸೇರಿಸುವ ಕಾರ್ಯಾಚರಣೆ ನಡೆದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಚಂದ್ರಯಾನ-3 ಮಿಷಿನ್ ವೇಳಾಪಟ್ಟಿಗೆ ಅನುಗುಣವಾಗಿ ನಡೆದಿದ್ದು, ಬಾಹ್ಯಾಕಾಶ ನೌಕೆಯ ಸ್ಥಿತಿ ಸಹಜವಾಗಿದೆ ಎಂದು ಇಸ್ರೋ ಅಧಿಕಾರಿಗಳು ಹೇಳಿದ್ದಾರೆ.

ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಹೊಂದಿದೆ. ಲ್ಯಾಂಡರ್ ಮತ್ತು ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು 14 ದಿನಗಳ ಕಾಲ ಅಲ್ಲಿ ಪ್ರಯೋಗಗಳನ್ನು ನಡೆಸುತ್ತದೆ. ಈ ಕಾರ್ಯಾಚರಣೆಯ ಮೂಲಕ, ಇಸ್ರೋ ಚಂದ್ರನ ಮೇಲ್ಮೈಯಲ್ಲಿ ಭೂಕಂಪಗಳು ಹೇಗೆ ಸಂಭವಿಸುತ್ತವೆ ಮತ್ತು ಚಂದ್ರನ ಮಣ್ಣನ್ನು ಅಧ್ಯಯನ ಮಾಡುತ್ತದೆ ಎಂಬುದನ್ನು ಕಂಡುಹಿಡಿಯುತ್ತದೆ. ಇಸ್ರೋ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಮೃದುವಾಗಿ ಇಳಿಸಲು ಪ್ರಯತ್ನಿಸುತ್ತದೆ.

lokesh

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

59 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

1 hour ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

1 hour ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

1 hour ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

1 hour ago