BREAKING NEWS

ಚಂದ್ರಯಾನ-3 : ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್‌ ರೋವರ್‌

ನವದೆಹಲಿ : ಚಂದ್ರನ ಅಂಗಳದಲ್ಲಿ ಇಸ್ರೋದ ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‌ ಬಳಿಕ ಹಲವು ಗಂಟೆಗಳ ನಂತರ ವಿಕ್ರಮ್‌ ಲ್ಯಾಂಡರ್‌ನಿಂದ ರೋವರ್‌ ಹೊರಬಂದಿದ್ದು, ಚಂದ್ರನ ಮೇಲೆ ವೈಜ್ಞಾನಿಕ ಅಧ್ಯಯನ ಆರಂಭಿಸಿದೆ.

ಈ ಕುರಿತು ಸುಮಾರು 8:26ರ ಹೊತ್ತಿಗೆ ಇಸ್ರೋ ಟ್ವಿಟ್ಟರ್‌ ಖಾತೆಯಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಚಂದ್ರಯಾನ-3 ರೋವರ್‌: ಭಾರತದಲ್ಲಿ ತಯಾರಿಸಲಾಗಿದೆ, ಚಂದ್ರನಿಗಾಗಿ ಮಾಡಲ್ಪಟ್ಟಿದೆ. ಚಂದ್ರಯಾನ-3 ರೋವರ್ ಲ್ಯಾಂಡರ್‌ನಿಂದ ಕೆಳಗೆ ಇಳಿಯಿತು. ಚಂದ್ರನ ಮೇಲೆ ಭಾರತ ನಡೆದಾಡಿತು. ಶೀಘ್ರವೇ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಇಸ್ರೋ ತಿಳಿಸಿದೆ.

ಯಶಸ್ವಿ ಲ್ಯಾಂಡಿಂಗ್‌ ಬಳಿಕ ಮುಂದಿನ ಹಂತ ಪ್ರಗ್ಯಾನ್‌ ರೋವರ್‌ ಚಂದ್ರನ ಮೇಲ್ಮೈನಲ್ಲಿ ಅಧ್ಯಯನ ನಡೆಸಲಿದೆ. ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಇಳಿದು ಧೂಳೆಬ್ಬಿಸಿದೆ. ಇದೇ ಕಾರಣಕ್ಕೆ ಪ್ರಗ್ಯಾನ್‌ ರೋವರ್‌ ಕೆಲ ಗಂಟೆಗಳು ಕಾದು ಹೊರಬಂದಿದೆ ಎನ್ನಲಾಗಿದೆ.

ಪ್ರಗ್ಯಾನ್‌ ರೋವರ್‌ ತಡವಾಗಿ ಹೊರಬರಲು ಕಾರಣವೇನು? : ಸುಮಾರು 1,749.8 ಕೆಜಿ ತೂಕದ ಲ್ಯಾಂಡರ್‌ ಬಂದು ಚಂದ್ರನ ಮೇಲೆ ಹೆಜ್ಜೆ ಇಟ್ಟಾಗ ಅದರ ಸುತ್ತಲೂ ಧೂಳು ಆವರಿಸಿತು. ಅಲ್ಲಿನ ದುರ್ಬಲ ಗುರುತ್ವಾಕರ್ಷಣೆ ಶಕ್ತಿಯ ಕಾರಣದಿಂದ ಆ ದಟ್ಟವಾಗಿರುವ ಧೂಳು ತಕ್ಷಣಕ್ಕೆ ಕಡಿಮೆ ಆಗುವುದು ಕಷ್ಟ. ಈ ವೇಳೆ ರೋವರ್‌ ಹೊರ ಬಂದರೆ, ಆ ಧೂಳಿನ ಕಣಗಳು ರೋವರ್‌ನಲ್ಲಿರುವ ಸೆನ್ಸರ್‌ಗಳು, ಕ್ಯಾಮೆರಾಗಳ ಮೇಲೆ ಕುಳಿತುಕೊಳ್ಳುತ್ತದೆ. ಹೀಗಾಗಿ ಸ್ವಲ್ಪ ಸಮಯ ಕಾದು ನಂತರ ರೋವರ್‌ ಹೊರಬಂದಿದೆ.

lokesh

Recent Posts

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 mins ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

1 hour ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

2 hours ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

2 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago