BREAKING NEWS

ಚಂದ್ರಯಾನ-3 : ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್‌ ರೋವರ್‌

ನವದೆಹಲಿ : ಚಂದ್ರನ ಅಂಗಳದಲ್ಲಿ ಇಸ್ರೋದ ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‌ ಬಳಿಕ ಹಲವು ಗಂಟೆಗಳ ನಂತರ ವಿಕ್ರಮ್‌ ಲ್ಯಾಂಡರ್‌ನಿಂದ ರೋವರ್‌ ಹೊರಬಂದಿದ್ದು, ಚಂದ್ರನ ಮೇಲೆ ವೈಜ್ಞಾನಿಕ ಅಧ್ಯಯನ ಆರಂಭಿಸಿದೆ.

ಈ ಕುರಿತು ಸುಮಾರು 8:26ರ ಹೊತ್ತಿಗೆ ಇಸ್ರೋ ಟ್ವಿಟ್ಟರ್‌ ಖಾತೆಯಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಚಂದ್ರಯಾನ-3 ರೋವರ್‌: ಭಾರತದಲ್ಲಿ ತಯಾರಿಸಲಾಗಿದೆ, ಚಂದ್ರನಿಗಾಗಿ ಮಾಡಲ್ಪಟ್ಟಿದೆ. ಚಂದ್ರಯಾನ-3 ರೋವರ್ ಲ್ಯಾಂಡರ್‌ನಿಂದ ಕೆಳಗೆ ಇಳಿಯಿತು. ಚಂದ್ರನ ಮೇಲೆ ಭಾರತ ನಡೆದಾಡಿತು. ಶೀಘ್ರವೇ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಇಸ್ರೋ ತಿಳಿಸಿದೆ.

ಯಶಸ್ವಿ ಲ್ಯಾಂಡಿಂಗ್‌ ಬಳಿಕ ಮುಂದಿನ ಹಂತ ಪ್ರಗ್ಯಾನ್‌ ರೋವರ್‌ ಚಂದ್ರನ ಮೇಲ್ಮೈನಲ್ಲಿ ಅಧ್ಯಯನ ನಡೆಸಲಿದೆ. ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಇಳಿದು ಧೂಳೆಬ್ಬಿಸಿದೆ. ಇದೇ ಕಾರಣಕ್ಕೆ ಪ್ರಗ್ಯಾನ್‌ ರೋವರ್‌ ಕೆಲ ಗಂಟೆಗಳು ಕಾದು ಹೊರಬಂದಿದೆ ಎನ್ನಲಾಗಿದೆ.

ಪ್ರಗ್ಯಾನ್‌ ರೋವರ್‌ ತಡವಾಗಿ ಹೊರಬರಲು ಕಾರಣವೇನು? : ಸುಮಾರು 1,749.8 ಕೆಜಿ ತೂಕದ ಲ್ಯಾಂಡರ್‌ ಬಂದು ಚಂದ್ರನ ಮೇಲೆ ಹೆಜ್ಜೆ ಇಟ್ಟಾಗ ಅದರ ಸುತ್ತಲೂ ಧೂಳು ಆವರಿಸಿತು. ಅಲ್ಲಿನ ದುರ್ಬಲ ಗುರುತ್ವಾಕರ್ಷಣೆ ಶಕ್ತಿಯ ಕಾರಣದಿಂದ ಆ ದಟ್ಟವಾಗಿರುವ ಧೂಳು ತಕ್ಷಣಕ್ಕೆ ಕಡಿಮೆ ಆಗುವುದು ಕಷ್ಟ. ಈ ವೇಳೆ ರೋವರ್‌ ಹೊರ ಬಂದರೆ, ಆ ಧೂಳಿನ ಕಣಗಳು ರೋವರ್‌ನಲ್ಲಿರುವ ಸೆನ್ಸರ್‌ಗಳು, ಕ್ಯಾಮೆರಾಗಳ ಮೇಲೆ ಕುಳಿತುಕೊಳ್ಳುತ್ತದೆ. ಹೀಗಾಗಿ ಸ್ವಲ್ಪ ಸಮಯ ಕಾದು ನಂತರ ರೋವರ್‌ ಹೊರಬಂದಿದೆ.

lokesh

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

1 hour ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

2 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

2 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

3 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

3 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

6 hours ago