ನವದೆಹಲಿ : ಚಂದ್ರನ ಅಂಗಳದಲ್ಲಿ ಇಸ್ರೋದ ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಬಳಿಕ ಹಲವು ಗಂಟೆಗಳ ನಂತರ ವಿಕ್ರಮ್ ಲ್ಯಾಂಡರ್ನಿಂದ ರೋವರ್ ಹೊರಬಂದಿದ್ದು, ಚಂದ್ರನ ಮೇಲೆ ವೈಜ್ಞಾನಿಕ ಅಧ್ಯಯನ ಆರಂಭಿಸಿದೆ.
ಈ ಕುರಿತು ಸುಮಾರು 8:26ರ ಹೊತ್ತಿಗೆ ಇಸ್ರೋ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಚಂದ್ರಯಾನ-3 ರೋವರ್: ಭಾರತದಲ್ಲಿ ತಯಾರಿಸಲಾಗಿದೆ, ಚಂದ್ರನಿಗಾಗಿ ಮಾಡಲ್ಪಟ್ಟಿದೆ. ಚಂದ್ರಯಾನ-3 ರೋವರ್ ಲ್ಯಾಂಡರ್ನಿಂದ ಕೆಳಗೆ ಇಳಿಯಿತು. ಚಂದ್ರನ ಮೇಲೆ ಭಾರತ ನಡೆದಾಡಿತು. ಶೀಘ್ರವೇ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಇಸ್ರೋ ತಿಳಿಸಿದೆ.
ಯಶಸ್ವಿ ಲ್ಯಾಂಡಿಂಗ್ ಬಳಿಕ ಮುಂದಿನ ಹಂತ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈನಲ್ಲಿ ಅಧ್ಯಯನ ನಡೆಸಲಿದೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದು ಧೂಳೆಬ್ಬಿಸಿದೆ. ಇದೇ ಕಾರಣಕ್ಕೆ ಪ್ರಗ್ಯಾನ್ ರೋವರ್ ಕೆಲ ಗಂಟೆಗಳು ಕಾದು ಹೊರಬಂದಿದೆ ಎನ್ನಲಾಗಿದೆ.
ಪ್ರಗ್ಯಾನ್ ರೋವರ್ ತಡವಾಗಿ ಹೊರಬರಲು ಕಾರಣವೇನು? : ಸುಮಾರು 1,749.8 ಕೆಜಿ ತೂಕದ ಲ್ಯಾಂಡರ್ ಬಂದು ಚಂದ್ರನ ಮೇಲೆ ಹೆಜ್ಜೆ ಇಟ್ಟಾಗ ಅದರ ಸುತ್ತಲೂ ಧೂಳು ಆವರಿಸಿತು. ಅಲ್ಲಿನ ದುರ್ಬಲ ಗುರುತ್ವಾಕರ್ಷಣೆ ಶಕ್ತಿಯ ಕಾರಣದಿಂದ ಆ ದಟ್ಟವಾಗಿರುವ ಧೂಳು ತಕ್ಷಣಕ್ಕೆ ಕಡಿಮೆ ಆಗುವುದು ಕಷ್ಟ. ಈ ವೇಳೆ ರೋವರ್ ಹೊರ ಬಂದರೆ, ಆ ಧೂಳಿನ ಕಣಗಳು ರೋವರ್ನಲ್ಲಿರುವ ಸೆನ್ಸರ್ಗಳು, ಕ್ಯಾಮೆರಾಗಳ ಮೇಲೆ ಕುಳಿತುಕೊಳ್ಳುತ್ತದೆ. ಹೀಗಾಗಿ ಸ್ವಲ್ಪ ಸಮಯ ಕಾದು ನಂತರ ರೋವರ್ ಹೊರಬಂದಿದೆ.
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…
ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…
ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…