BREAKING NEWS

ಚಂದ್ರಯಾನ-3 ಯಶಸ್ವಿ: “ಈ ಕ್ಷಣ ಅಭೂತಪೂರ್ವ, ಐತಿಹಾಸಿಕ” ಎಂದ ಪ್ರಧಾನಿ ಮೋದಿ

ಜೋಹಾನ್ಸ್‌ಬರ್ಗ್ : ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ ಕ್ಷಣಗಳನ್ನು ವೀಕ್ಷಿಸಿದರು.

ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯುತ್ತಿದ್ದಂತೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರು “ಭಾರತ ಚಂದ್ರನ ಮೇಲಿದೆ” ಎಂದು ಹೇಳಿದರು.

ಬಳಿಕ ವರ್ಚುವಲ್ ಮೂಲಕ ದೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣ ಅಮೂಲ್ಯವಾಗಿದೆ ಮತ್ತು ಅಭೂತಪೂರ್ವವಾಗಿದೆ. ಈ ಕ್ಷಣ ನವ ಭಾರತದ ಉದಯವಾಗಿದೆ. ಈ ಕ್ಷಣ 1.4 ಬಿಲಿಯನ್ ಹೃದಯ ಬಡಿತಗಳ ಶಕ್ತಿಯಾಗಿದೆ. ಅಮೃತ ಕಾಲದ ಈ ಹಂತದಲ್ಲಿ ಅಮೃತ ವರ್ಷ ಯಶಸ್ವಿಯಾಗಿದೆ” ಎಂದು ಹೇಳಿದರು.

ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಅಭೂತಪೂರ್ವ ಸಾಧನೆಗಾಗಿ ಇಸ್ರೋ, ಅದರ ವಿಜ್ಞಾನಿಗಳನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ನಾನು ದಕ್ಷಿಣ ಆಫ್ರಿಕಾದಲ್ಲಿರಬಹುದು ಆದರೆ ನನ್ನ ಹೃದಯ ಯಾವಾಗಲೂ ಚಂದ್ರಯಾನ ಮಿಷನ್‌ನಲ್ಲಿದೆ”  “ಇದೊಂದು ಐತಿಹಾಸಿಕ ಕ್ಷಣ. ನವ ಭಾರತದ ಹೊಸ ಹಾರಾಟಕ್ಕೆ ನಾವು ಸಾಕ್ಷಿಯಾಗಿದ್ದೇವೆ; ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಸಾಫ್ಟ್ ಲ್ಯಾಂಡಿಂಗ್ ಮಾಡುತ್ತಿದ್ದಂತೆ ಬೆಂಗಳೂರಿನ ಇಸ್ರೋದ ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್‌ನಲ್ಲಿ ಸಂಭ್ರಮಾಚರಣೆ ಮಾಡುವ ಮೂಲಕ ಹೊಸ ಇತಿಹಾಸ ಬರೆಯಲಾಗಿದೆ ಎಂದು ಮೋದಿ ಹೇಳಿದ್ದಾರೆ.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

10 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

14 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

19 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

19 hours ago