BREAKING NEWS

ಚಂದ್ರಯಾನ-3 : ಗಗನ ನೌಕೆ ಸೆರೆಹಿಡಿದ ಚಂದ್ರನ ಮೊದಲ ಚಿತ್ರ

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ.

ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಚಂದ್ರಯಾನ್-3 ಮಿಷನ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಮೂನ್ ಮಿಷನ್ ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.

ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ‍್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ಹೇಳಿತ್ತು.

ಚಂದ್ರಯಾನ-3 ಗಗನನೌಕೆಯು ಆಗಸ್ಟ್ 5 ರಂದು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಈ ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸಲು ದ್ರವ ಎಂಜಿನ್ ಅನ್ನು ಮತ್ತೆ ಉರಿಸಲಾಗುತ್ತದೆ. ಚಂದ್ರಯಾನವು ಚಂದ್ರನನ್ನು ನಾಲ್ಕು ಬಾರಿ ಸುತ್ತುತ್ತದೆ. ಪ್ರತಿ ಸುತ್ತಿನಲ್ಲೂ ಚಂದ್ರನ ಮೇಲ್ಮೈಗೆ ಹತ್ತಿರವಾಗುತ್ತದೆ.

ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5:47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

11 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago