BREAKING NEWS

ಚಂದ್ರಯಾನ-3 : ಗಗನ ನೌಕೆ ಸೆರೆಹಿಡಿದ ಚಂದ್ರನ ಮೊದಲ ಚಿತ್ರ

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ.

ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಚಂದ್ರಯಾನ್-3 ಮಿಷನ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಮೂನ್ ಮಿಷನ್ ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.

ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ‍್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ಹೇಳಿತ್ತು.

ಚಂದ್ರಯಾನ-3 ಗಗನನೌಕೆಯು ಆಗಸ್ಟ್ 5 ರಂದು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಈ ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸಲು ದ್ರವ ಎಂಜಿನ್ ಅನ್ನು ಮತ್ತೆ ಉರಿಸಲಾಗುತ್ತದೆ. ಚಂದ್ರಯಾನವು ಚಂದ್ರನನ್ನು ನಾಲ್ಕು ಬಾರಿ ಸುತ್ತುತ್ತದೆ. ಪ್ರತಿ ಸುತ್ತಿನಲ್ಲೂ ಚಂದ್ರನ ಮೇಲ್ಮೈಗೆ ಹತ್ತಿರವಾಗುತ್ತದೆ.

ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5:47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.

lokesh

Recent Posts

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

36 mins ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

53 mins ago

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

1 hour ago

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…

1 hour ago

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು…

2 hours ago

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಪ್ರಕಾಶ್‌ ರಾಜ್‌ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

2 hours ago