ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ.
ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಚಂದ್ರಯಾನ್-3 ಮಿಷನ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಮೂನ್ ಮಿಷನ್ ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.
ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ಹೇಳಿತ್ತು.
ಚಂದ್ರಯಾನ-3 ಗಗನನೌಕೆಯು ಆಗಸ್ಟ್ 5 ರಂದು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಈ ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸಲು ದ್ರವ ಎಂಜಿನ್ ಅನ್ನು ಮತ್ತೆ ಉರಿಸಲಾಗುತ್ತದೆ. ಚಂದ್ರಯಾನವು ಚಂದ್ರನನ್ನು ನಾಲ್ಕು ಬಾರಿ ಸುತ್ತುತ್ತದೆ. ಪ್ರತಿ ಸುತ್ತಿನಲ್ಲೂ ಚಂದ್ರನ ಮೇಲ್ಮೈಗೆ ಹತ್ತಿರವಾಗುತ್ತದೆ.
ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಪ್ರೊಪಲ್ಷನ್ ಮಾಡ್ಯೂಲ್ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5:47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…