ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ.
ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಚಂದ್ರಯಾನ್-3 ಮಿಷನ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಮೂನ್ ಮಿಷನ್ ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.
ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ಹೇಳಿತ್ತು.
ಚಂದ್ರಯಾನ-3 ಗಗನನೌಕೆಯು ಆಗಸ್ಟ್ 5 ರಂದು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಈ ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸಲು ದ್ರವ ಎಂಜಿನ್ ಅನ್ನು ಮತ್ತೆ ಉರಿಸಲಾಗುತ್ತದೆ. ಚಂದ್ರಯಾನವು ಚಂದ್ರನನ್ನು ನಾಲ್ಕು ಬಾರಿ ಸುತ್ತುತ್ತದೆ. ಪ್ರತಿ ಸುತ್ತಿನಲ್ಲೂ ಚಂದ್ರನ ಮೇಲ್ಮೈಗೆ ಹತ್ತಿರವಾಗುತ್ತದೆ.
ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಪ್ರೊಪಲ್ಷನ್ ಮಾಡ್ಯೂಲ್ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5:47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…