ಬೆಂಗಳೂರು : ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…