BREAKING NEWS

ಲೋಕಸಭಾ ಚುನಾವಣೇ ಬಳಿಕ ರಾಜಕೀಯದಲ್ಲಿ ಬದಲಾವಣೆ : ಬಿ.ವೈ.ವಿಜಯೇಂದ್ರ ಭವಿಷ್ಯ

ಮೈಸೂರು: ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣಲ್ಲಿ ದುರಹಂಕಾರದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಯಾರೂ ಕೂಡ ಸಹಿಸಲ್ಲ. ಗಂಭೀರವಾದ ಘಟನೆ ನಡೆದಿದ್ದರೂ ವೈಯಕ್ತಿಕ ವಿಚಾರಕ್ಕೆ ಕೊಲೆಯಾಗಿದೆ ಎಂದು ಸಿಎಂ, ಸಚಿವರು ಹೇಳುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದರು.

ಬಿಜೆಪಿ ಚುನಾವಣೆಯನ್ನು ಬದಿಗಿಟ್ಟು ಹೋರಾಟ ಮಾಡುತ್ತಿದ್ದೇವೆ. ನೇಹಾ ಪೋಷಕರೇ ಈ ಘಟನೆ ಹಿಂದೆ ಲವ್ ಜಿಹಾದ್ ಇದೇ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಅಂತ ಜನರು ಮಾತನಾಡುತ್ತಿದ್ದಾರೆ. ಈ ಆರೋಪಗಳಿಗೆ ರಾಜ್ಯ ಸರ್ಕಾರವೇ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ನೇಹಾ ಹಾಗೂ ಆರೋಪಿ ಫೋಟೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ನೀಚ ಕೆಲಸ ಮಾಡುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು. ಫೋಟೋ ವೈರಲ್ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಕಿಡಿಕಾರಿದರು.

ಗ್ಯಾರಂಟಿ ನಿಲ್ಲಿಸಿದರೆ ಜನರೇ ಬಡಿಗೆ ತೆಗೆದುಕೊಂಡು ಸರ್ಕಾರವನ್ನು ಬಡಿಯುತ್ತಾರೆ ಎನ್ನುವ ಬಗ್ಗೆ ಎಚ್ಚರವಿರಲಿ. ಗ್ಯಾರಂಟಿ ಹೆಸರು ಹೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.
ಈ ಸರ್ಕಾರದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಹೇಳಿ? ಒಂದೇ ಒಂದು ನಾಯಾಪೈಸೆ ಬಿಡುಗಡೆಯಾಗಿದ್ಯಾ? ಎಂದು ಪ್ರಶ್ನಿಸಿದರು.

ಮೋದಿ ರಾಜ್ಯದ ಭೇಟಿ ವೇಳೆ ಚೊಂಬು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಚುನಾವಣೆ ಮುಗಿದ ಮೇಲೆ ನಲಪಾಡ್ ಹಾಗೂ ಕಾಂಗ್ರೆಸ್ ನಾಯಕರಿಗೆ ಅದೇ ಪರಿಸ್ಥಿತಿ ಬರಲಿದೆ. ಫಲಿತಾಂಶ ಬಂದ ನಂತರ ಅವರು ಚೊಂಬು ಹಿಡಿದುಕೊಂಡು ಹೋಗುವ ಸ್ಥಿತಿ ಬರುತ್ತದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಜಾಹೀರಾತು, ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮಿತ್ತಿಲ್ಲ. ಅವರು ಏನಾದರೂ ಜಾಹೀರಾತು ಕೊಟ್ಟುಕೊಳ್ಳಲಿ. ಈ ಬಾರಿ ಜನ ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡುತ್ತಾರೆ. ರೈತರ ಸಾಲಮನ್ನಾ ಹಾಗೂ ಕಾಂಗ್ರೆಸ್ ಹೊಸ ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಯಾವುದನ್ನೂ ಪೂರೈಸಲ್ಲ. ಅವರು ಅಧಿಕಾರಕ್ಕೆ ಬಂದರೆ ತಾನೇ ಮಾಡುವುದು? ದೇಶದಲ್ಲಿ ಕಾಂಗ್ರೆಸ್ ೫೦ ಸೀಟ್ ಸಹ ದಾಟಲ್ಲ. ಆದ್ದರಿಂದ ಪ್ರಣಾಳಿಕೆ ಗ್ಯಾರಂಟಿ ಯಾವುದು ಜಾರಿಯಾಗಲ್ಲ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

11 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

12 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

12 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

13 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

13 hours ago