BREAKING NEWS

ಲೋಕಸಭಾ ಚುನಾವಣೇ ಬಳಿಕ ರಾಜಕೀಯದಲ್ಲಿ ಬದಲಾವಣೆ : ಬಿ.ವೈ.ವಿಜಯೇಂದ್ರ ಭವಿಷ್ಯ

ಮೈಸೂರು: ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣಲ್ಲಿ ದುರಹಂಕಾರದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಯಾರೂ ಕೂಡ ಸಹಿಸಲ್ಲ. ಗಂಭೀರವಾದ ಘಟನೆ ನಡೆದಿದ್ದರೂ ವೈಯಕ್ತಿಕ ವಿಚಾರಕ್ಕೆ ಕೊಲೆಯಾಗಿದೆ ಎಂದು ಸಿಎಂ, ಸಚಿವರು ಹೇಳುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದರು.

ಬಿಜೆಪಿ ಚುನಾವಣೆಯನ್ನು ಬದಿಗಿಟ್ಟು ಹೋರಾಟ ಮಾಡುತ್ತಿದ್ದೇವೆ. ನೇಹಾ ಪೋಷಕರೇ ಈ ಘಟನೆ ಹಿಂದೆ ಲವ್ ಜಿಹಾದ್ ಇದೇ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಅಂತ ಜನರು ಮಾತನಾಡುತ್ತಿದ್ದಾರೆ. ಈ ಆರೋಪಗಳಿಗೆ ರಾಜ್ಯ ಸರ್ಕಾರವೇ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ನೇಹಾ ಹಾಗೂ ಆರೋಪಿ ಫೋಟೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ನೀಚ ಕೆಲಸ ಮಾಡುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು. ಫೋಟೋ ವೈರಲ್ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಕಿಡಿಕಾರಿದರು.

ಗ್ಯಾರಂಟಿ ನಿಲ್ಲಿಸಿದರೆ ಜನರೇ ಬಡಿಗೆ ತೆಗೆದುಕೊಂಡು ಸರ್ಕಾರವನ್ನು ಬಡಿಯುತ್ತಾರೆ ಎನ್ನುವ ಬಗ್ಗೆ ಎಚ್ಚರವಿರಲಿ. ಗ್ಯಾರಂಟಿ ಹೆಸರು ಹೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.
ಈ ಸರ್ಕಾರದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಹೇಳಿ? ಒಂದೇ ಒಂದು ನಾಯಾಪೈಸೆ ಬಿಡುಗಡೆಯಾಗಿದ್ಯಾ? ಎಂದು ಪ್ರಶ್ನಿಸಿದರು.

ಮೋದಿ ರಾಜ್ಯದ ಭೇಟಿ ವೇಳೆ ಚೊಂಬು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಚುನಾವಣೆ ಮುಗಿದ ಮೇಲೆ ನಲಪಾಡ್ ಹಾಗೂ ಕಾಂಗ್ರೆಸ್ ನಾಯಕರಿಗೆ ಅದೇ ಪರಿಸ್ಥಿತಿ ಬರಲಿದೆ. ಫಲಿತಾಂಶ ಬಂದ ನಂತರ ಅವರು ಚೊಂಬು ಹಿಡಿದುಕೊಂಡು ಹೋಗುವ ಸ್ಥಿತಿ ಬರುತ್ತದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಜಾಹೀರಾತು, ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮಿತ್ತಿಲ್ಲ. ಅವರು ಏನಾದರೂ ಜಾಹೀರಾತು ಕೊಟ್ಟುಕೊಳ್ಳಲಿ. ಈ ಬಾರಿ ಜನ ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡುತ್ತಾರೆ. ರೈತರ ಸಾಲಮನ್ನಾ ಹಾಗೂ ಕಾಂಗ್ರೆಸ್ ಹೊಸ ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಯಾವುದನ್ನೂ ಪೂರೈಸಲ್ಲ. ಅವರು ಅಧಿಕಾರಕ್ಕೆ ಬಂದರೆ ತಾನೇ ಮಾಡುವುದು? ದೇಶದಲ್ಲಿ ಕಾಂಗ್ರೆಸ್ ೫೦ ಸೀಟ್ ಸಹ ದಾಟಲ್ಲ. ಆದ್ದರಿಂದ ಪ್ರಣಾಳಿಕೆ ಗ್ಯಾರಂಟಿ ಯಾವುದು ಜಾರಿಯಾಗಲ್ಲ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

11 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

12 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago