BREAKING NEWS

ಇಲಿ ಕೊಂದವನ ವಿರುದ್ಧ ಚಾರ್ಜ್‌ಶೀಟ್ : ಮರಣೋತ್ತರ ಪರೀಕ್ಷೆಯೇ ಆಧಾರ

ಉತ್ತರ ಪ್ರದೇಶ : ಇಲಿಯೊಂದನ್ನು ಇಟ್ಟಿಗೆಗೆ ಕಟ್ಟಿ ಹಾಕಿ ನೀರಿನಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ಉತ್ತರ ಪ್ರದೇಶದ ಬದೌನ್ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ದ ಚಾರ್ಜ್‌ ಶೀಟ್ ದಾಖಲಿಸಿದ್ಧಾರೆ. 30 ವರ್ಷದ ವ್ಯಕ್ತಿಯ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಆರೋಪ ಪಟ್ಟಿ ದಾಖಲು ಮಾಡಿದ್ದಾರೆ. 2022ರ ನವೆಂಬರ್‌ನಲ್ಲಿ ಆರೋಪಿ ಈ ಕೃತ್ಯ ಎಸಗಿದ್ದ ಎಂದು ಚಾರ್ಜ್ ಶೀಟ್‌ನಲ್ಲಿ ನಮೂದಿಸಲಾಗಿದೆ.

ಇಂಥಾದ್ದೊಂದು ವಿಚಿತ್ರ ಹಾಗೂ ವಿಲಕ್ಷಣ ಪ್ರಕರಣದ ಅಡಿ ವ್ಯಕ್ತಿಯೊಬ್ಬನ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಇದೇ ಮೊದಲ ಬಾರಿಗೆ ಆರೋಪ ಪಟ್ಟಿ ದಾಖಲು ಮಾಡಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಹಿರಿಯ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ಧಾರೆ.

ವೃತ್ತಿಯಲ್ಲಿ ಕುಂಬಾರನಾಗಿರುವ ಆರೋಪಿ ಮನೋಜ್ ಕುಮಾರ್, ಪುಟ್ಟದೊಂದು ಮನೆಯಲ್ಲಿ ತನ್ನ ಮೂವರು ಹೆಣ್ಣು ಮಕ್ಕಳ ಜೊತೆ ವಾಸವಾಗಿದ್ದಾನೆ. ಕಳೆದ ವರ್ಷ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 429ರ ಅಡಿ ಪ್ರಕರಣ ದಾಖಲಾಗಿತ್ತು. ಕಿಡಿಗೇಡಿತನದಿಂದ ಪ್ರಾಣಿಯನ್ನು ಕೊಂದ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು. ಇದಲ್ಲದೆ ಪ್ರಾಣಿಗಳ ವಿರುದ್ಧದ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11 (1) ರ ಅಡಿಯಲ್ಲೂ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈತ ಇಟ್ಟಿಗೆಯೊಂದಕ್ಕೆ ಇಲಿಯನ್ನು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಲ್ಲುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಸತ್ತ ಇಲಿಯನ್ನು ಇಟ್ಟಿಗೆಯಲ್ಲಿ ಕಟ್ಟಿದ್ದ ದಾರದ ಸಮೇತ ಆರೋಪಿ ವಿಡಿಯೋದಲ್ಲಿ ತೋರಿಸಿದ್ದ. ಸಾಮಾಜಿಕ ಜಾಲತಾಣದ ವಿಡಿಯೋ ಆಧರಿಸಿ ಆರೋಪಿ ವಿರುದ್ಧ ಸ್ಥಳೀಯ ಪ್ರಾಣಿ ಹಕ್ಕು ಕಾರ್ಯಕರ್ತರು ನವೆಂಬರ್ 2022ರಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದರಾದರೂ ಸ್ಥಳೀಯ ನ್ಯಾಯಾಲಯವು ಜಾಮೀನು ನೀಡಿತ್ತು.

ಇದಾದ ಬಳಿಕ ವಿಡಿಯೋದಲ್ಲಿ ಕಂಡ ಇಲಿಯ ಶವವನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಅದರ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲೂ ಕೂಡಾ ಇಲಿಯನ್ನು ಮುಳುಗಿಸಿ ಕೊಲ್ಲಲಾಗಿದೆ ಎಂಬ ವರದಿ ಬಂದಿತ್ತು. ಈ ಮರಣೋತ್ತರ ಪರೀಕ್ಷಾ ವರದಿ, ವಿಡಿಯೋ ಸಾಕ್ಷ್ಯಾಧಾರ, ಸ್ಥಳೀಯರ ಹೇಳಿಕೆಗಳನ್ನು ಆಧರಿಸಿ ಪೊಲೀಸರು ಆರೋಪಿ ವಿರುದ್ದ ಆರೋಪ ಪಟ್ಟಿ ಸಿದ್ದಪಡಿಸಿದ್ದಾರೆ. ಇದೀಗ ಈ ಚಾರ್ಜ್‌ಶೀಟ್‌ ಅನ್ನು ವೃತ್ತ ನಿರೀಕ್ಷಕರು ಪರಿಶೀಲಿಸಿದ ಬಳಿಕ ಅದನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ.

ಆರೋಪಿ ವಿರುದ್ದ ದೂರು ನೀಡಿದ್ದ ಪ್ರಾಣಿ ಹಕ್ಕು ಕಾರ್ಯಕರ್ತ ವಿಕೇಂದ್ರ ಶರ್ಮಾ, ಇಲಿಗಳು ಮನುಷ್ಯರಿಗೆ ಹಲವು ವಿಧದಲ್ಲಿ ಕಿರಿಕಿರಿ ಉಂಟು ಮಾಡುತ್ತವೆ. ಆದರೆ, ಅದನ್ನು ಕೊಂದ ರೀತಿ ಮಾತ್ರ ತುಂಬಾನೇ ಕ್ರೂರವಾದದ್ದು. ಹೀಗಾಗಿ ಈ ಕೃತ್ಯ ಪ್ರಾಣಿಗಳ ವಿರುದ್ದ ಕ್ರೌರ್ಯದ ಅಡಿ ಬರುತ್ತದೆ ಎಂದು ಹೇಳಿದ್ದಾರೆ. ಈ ರೀತಿಯ ಪ್ರಕರಣ ದಾಖಲು ಮಾಡುವ ಮೂಲಕ ಪ್ರಾಣಿಗಳ ವಿರುದ್ಧ ಕ್ರೌರ್ಯ ಎಸಗುವವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಶರ್ಮಾ ಅವರು ಹೇಳುತ್ತಾರೆ.

lokesh

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago