ನವದೆಹಲಿ : ಅದಾನಿ ಸಂಸ್ಥೆಯಿಂದ ಸ್ಟಾಕ್ ಮಾರ್ಕೆಟ್ ತಿರುಚುವಿಕೆ ಕುರಿತ ಆರೋಪಗಳಿಗೆ ಸಂಬಂಧಿಸಿದ ದೂರುಗಳ ವಿಚಾರಣೆಯನ್ನು ಸತತ ಮುಂದೂಡಲಾಗುತ್ತಿರುವ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೆ ಹೇಳುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.
ಈ ಪ್ರಕರಣದ ವಿಚಾರಣೆ ಮೂಲತಃ ಆಗಸ್ಟ್ 28ಕ್ಕೆ ನಿಗದಿಯಾಗಿದ್ದರೂ ಮುಂದೂಡಲಾಗಿದೆ.
ವಿಚಾರಣೆಯನ್ನು ನಿರಂತರ ಮುಂದೂಡಲಾಗುತ್ತಿರುವ ಕುರಿತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸೋಮವಾರದ ಕಲಾಪ ಆರಂಭಕ್ಕಿಂತ ಮುಂಚೆ ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತಂದಾಗ ಮೇಲಿನ ಭರವಸೆಯನ್ನು ಅವರಿಗೆ ನೀಡಲಾಗಿದೆ.
ಅದಾನಿ ಸಂಸ್ಥೆ ಸ್ಟಾಕ್ ಮಾರ್ಕೆಟ್ ತಿರುಚುವಿಕೆಯನ್ನು ಮಾಡಿದೆ ಎಂಬ ಆರೋಪಗಳ ಕುರಿತಾದ 24 ಅಂಶಗಳ ಪೈಕಿ 22 ಅಂಶಗಳ ತನಿಖೆ ಪೂರ್ಣಗೊಳಿಸಿರುವುದಾಗಿ ಸೆಬಿ ಆಗಸ್ಟ್ 25ರಂದು ಸಲ್ಲಿಸಿದ್ದ ನವೀಕೃತ ಸ್ಥಿತಿಗತಿ ವರದಿಯಲ್ಲಿ ತಿಳಿಸಿತ್ತು.
ಹಿಂಡೆನ್ಬರ್ಗ್ ಆರೋಪಗಳ ನಂತರ 24 ವಿಚಾರಗಳ ಕುರಿತು ತನಿಖೆ ನಡೆಸುವಂತೆ ಸೆಬಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್ ಕಾಗೋಡು…
ಬೆಂಗಳೂರು: ಲೋಕ್ ಅದಾಲತ್ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…
ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…
ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…
ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…