ನವದೆಹಲಿ : ಅದಾನಿ ಸಂಸ್ಥೆಯಿಂದ ಸ್ಟಾಕ್ ಮಾರ್ಕೆಟ್ ತಿರುಚುವಿಕೆ ಕುರಿತ ಆರೋಪಗಳಿಗೆ ಸಂಬಂಧಿಸಿದ ದೂರುಗಳ ವಿಚಾರಣೆಯನ್ನು ಸತತ ಮುಂದೂಡಲಾಗುತ್ತಿರುವ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೆ ಹೇಳುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.
ಈ ಪ್ರಕರಣದ ವಿಚಾರಣೆ ಮೂಲತಃ ಆಗಸ್ಟ್ 28ಕ್ಕೆ ನಿಗದಿಯಾಗಿದ್ದರೂ ಮುಂದೂಡಲಾಗಿದೆ.
ವಿಚಾರಣೆಯನ್ನು ನಿರಂತರ ಮುಂದೂಡಲಾಗುತ್ತಿರುವ ಕುರಿತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸೋಮವಾರದ ಕಲಾಪ ಆರಂಭಕ್ಕಿಂತ ಮುಂಚೆ ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತಂದಾಗ ಮೇಲಿನ ಭರವಸೆಯನ್ನು ಅವರಿಗೆ ನೀಡಲಾಗಿದೆ.
ಅದಾನಿ ಸಂಸ್ಥೆ ಸ್ಟಾಕ್ ಮಾರ್ಕೆಟ್ ತಿರುಚುವಿಕೆಯನ್ನು ಮಾಡಿದೆ ಎಂಬ ಆರೋಪಗಳ ಕುರಿತಾದ 24 ಅಂಶಗಳ ಪೈಕಿ 22 ಅಂಶಗಳ ತನಿಖೆ ಪೂರ್ಣಗೊಳಿಸಿರುವುದಾಗಿ ಸೆಬಿ ಆಗಸ್ಟ್ 25ರಂದು ಸಲ್ಲಿಸಿದ್ದ ನವೀಕೃತ ಸ್ಥಿತಿಗತಿ ವರದಿಯಲ್ಲಿ ತಿಳಿಸಿತ್ತು.
ಹಿಂಡೆನ್ಬರ್ಗ್ ಆರೋಪಗಳ ನಂತರ 24 ವಿಚಾರಗಳ ಕುರಿತು ತನಿಖೆ ನಡೆಸುವಂತೆ ಸೆಬಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…