ನವದೆಹಲಿ : ಅದಾನಿ ಸಂಸ್ಥೆಯಿಂದ ಸ್ಟಾಕ್ ಮಾರ್ಕೆಟ್ ತಿರುಚುವಿಕೆ ಕುರಿತ ಆರೋಪಗಳಿಗೆ ಸಂಬಂಧಿಸಿದ ದೂರುಗಳ ವಿಚಾರಣೆಯನ್ನು ಸತತ ಮುಂದೂಡಲಾಗುತ್ತಿರುವ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೆ ಹೇಳುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.
ಈ ಪ್ರಕರಣದ ವಿಚಾರಣೆ ಮೂಲತಃ ಆಗಸ್ಟ್ 28ಕ್ಕೆ ನಿಗದಿಯಾಗಿದ್ದರೂ ಮುಂದೂಡಲಾಗಿದೆ.
ವಿಚಾರಣೆಯನ್ನು ನಿರಂತರ ಮುಂದೂಡಲಾಗುತ್ತಿರುವ ಕುರಿತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸೋಮವಾರದ ಕಲಾಪ ಆರಂಭಕ್ಕಿಂತ ಮುಂಚೆ ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತಂದಾಗ ಮೇಲಿನ ಭರವಸೆಯನ್ನು ಅವರಿಗೆ ನೀಡಲಾಗಿದೆ.
ಅದಾನಿ ಸಂಸ್ಥೆ ಸ್ಟಾಕ್ ಮಾರ್ಕೆಟ್ ತಿರುಚುವಿಕೆಯನ್ನು ಮಾಡಿದೆ ಎಂಬ ಆರೋಪಗಳ ಕುರಿತಾದ 24 ಅಂಶಗಳ ಪೈಕಿ 22 ಅಂಶಗಳ ತನಿಖೆ ಪೂರ್ಣಗೊಳಿಸಿರುವುದಾಗಿ ಸೆಬಿ ಆಗಸ್ಟ್ 25ರಂದು ಸಲ್ಲಿಸಿದ್ದ ನವೀಕೃತ ಸ್ಥಿತಿಗತಿ ವರದಿಯಲ್ಲಿ ತಿಳಿಸಿತ್ತು.
ಹಿಂಡೆನ್ಬರ್ಗ್ ಆರೋಪಗಳ ನಂತರ 24 ವಿಚಾರಗಳ ಕುರಿತು ತನಿಖೆ ನಡೆಸುವಂತೆ ಸೆಬಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…