BREAKING NEWS

ಚೆಕ್‌ಬೌನ್ಸ್‌ ಪ್ರಕರಣ: ಮಧು ಬಂಗಾರಪ್ಪಗೆ 6.96 ಕೋಟಿ ದಂಡ

ಬೆಂಗಳೂರು: ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ 6,96,70,000 ಕೋಟಿ ರೂ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಇಂದು (ಶುಕ್ರವಾರ) ಆದೇಶ ಹೊರಡಿಸಿದೆ.

ರಾಜೇಶ್‌ ಎಕ್ಸ್‌ಪೋರ್ಟ್ಸ್‌ ಸಂಸ್ಥೆ ನೀಡಿದ್ದ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಸಚಿವರಿಗೆ 6.96 ಕೋಟಿ ರೂಗಳ ಡಂದವನ್ನು ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ಆಗದೇ ಹೋದರೆ 6 ತಿಂಗಳ ಸೆರೆವಾಸ ಅನುಭವಿಸುವಂತೆ ಕೋರ್ಟ್‌ ಆದೇಶ ನೀಡಿದೆ.

ಆಕಾಶ್‌ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಇವರು, 2011ರಲ್ಲಿ ಚೆಕ್‌ ನೀಡಿದ್ದರು. 50 ಲಕ್ಷ ರೂ ಪಾವತಿಸಿ ಉಳಿದ ಮೊತ್ತ ಪಾವತಿಸಿರಲಿಲ್ಲ. ಖಾತೆಯಲ್ಲಿ ಹಣ ಇಲ್ಲದ ಕಾರಣ ಚೆಕ್‌ಬೌನ್ಸ್‌ ಆಗಿತ್ತು. ಈ ಹಿನ್ನಲೆ ರಾಜೇಶ್‌ ಎಕ್ಸ್‌ಪೋರ್ಟ್ಸ್‌ ಸಂಸ್ಥೆ 6.60 ಕೋಟಿ ರೂಗಳ ಪರಿಹಾರ ಕೋರಿ ಕೋರ್ಟ್‌ ಮೊರೆ ಹೋಗಿತ್ತು.

ನ್ಯಾಯಾಧೀಶರಾದ ಜೆ.ಪ್ರೀತ್‌ ಅವರು ಸಚಿವರಿಗೆ ದಂಡ ವಿಧಿಸಿ ಆದೇಶ ಹೋರಡಿಸಿದ್ದಾರೆ. 1, ಕೋಟಿ ರೂಗಳಲ್ಲಿ 6,96,70,000 ರೂಗಳನ್ನು ದೂರುದಾರರಿಗೆ ಪರಿಹಾರವಾಗಿ ನೀಡಬೇಕು ಮತ್ತು ರೂ. 10,000 ಗಳನ್ನು ಸರ್ಕಾರಕ್ಕೆ ದಂಡವಾಗಿ ಕಟ್ಟಬೇಕು ಎಂದು ಆದೇಶ ನೀಡಿದಾರೆ.
ಇದರ ಬದಲಿಗೆ ಮುಧು ಬಂಗಾರಪ್ಪ ಅವರು ಕೋರ್ಟ್‌ ಗೆ ಮುಚ್ಚಳಿಕೆ ನೀಡಿದ್ದು, ಇದನ್ನು ಒಪ್ಪಲು ಕೊರ್ಟ್‌ ನಿರಾಕರಿಸಿದೆ. ಈ ಹಿಂದೆಯೂ ಕೋರ್ಟ್‌ ನೀಡಿದ್ದ ಮುಚ್ಚಳಿಕೆಯನ್ನು ಸಚಿವರು ಪಾಲಿಸಿರಿಲಿಲ್ಲ ಹಾಗಾಗಿ ಕೋರ್ಟ್‌ ಅವರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

andolanait

Recent Posts

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

18 mins ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

45 mins ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

47 mins ago

ಚಾಮರಾಜನಗರ| ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…

59 mins ago

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ…

2 hours ago

ಎಂಇಎಸ್‌ ನಿಷೇಧಿಸುವಂತೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ ಪ್ರತಿಭಟನೆ ನಡೆಸಿದರು.…

2 hours ago