BREAKING NEWS

ಚೆಕ್‌ಬೌನ್ಸ್‌ ಪ್ರಕರಣ: ಮಧು ಬಂಗಾರಪ್ಪಗೆ 6.96 ಕೋಟಿ ದಂಡ

ಬೆಂಗಳೂರು: ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ 6,96,70,000 ಕೋಟಿ ರೂ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಇಂದು (ಶುಕ್ರವಾರ) ಆದೇಶ ಹೊರಡಿಸಿದೆ.

ರಾಜೇಶ್‌ ಎಕ್ಸ್‌ಪೋರ್ಟ್ಸ್‌ ಸಂಸ್ಥೆ ನೀಡಿದ್ದ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಸಚಿವರಿಗೆ 6.96 ಕೋಟಿ ರೂಗಳ ಡಂದವನ್ನು ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ಆಗದೇ ಹೋದರೆ 6 ತಿಂಗಳ ಸೆರೆವಾಸ ಅನುಭವಿಸುವಂತೆ ಕೋರ್ಟ್‌ ಆದೇಶ ನೀಡಿದೆ.

ಆಕಾಶ್‌ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಇವರು, 2011ರಲ್ಲಿ ಚೆಕ್‌ ನೀಡಿದ್ದರು. 50 ಲಕ್ಷ ರೂ ಪಾವತಿಸಿ ಉಳಿದ ಮೊತ್ತ ಪಾವತಿಸಿರಲಿಲ್ಲ. ಖಾತೆಯಲ್ಲಿ ಹಣ ಇಲ್ಲದ ಕಾರಣ ಚೆಕ್‌ಬೌನ್ಸ್‌ ಆಗಿತ್ತು. ಈ ಹಿನ್ನಲೆ ರಾಜೇಶ್‌ ಎಕ್ಸ್‌ಪೋರ್ಟ್ಸ್‌ ಸಂಸ್ಥೆ 6.60 ಕೋಟಿ ರೂಗಳ ಪರಿಹಾರ ಕೋರಿ ಕೋರ್ಟ್‌ ಮೊರೆ ಹೋಗಿತ್ತು.

ನ್ಯಾಯಾಧೀಶರಾದ ಜೆ.ಪ್ರೀತ್‌ ಅವರು ಸಚಿವರಿಗೆ ದಂಡ ವಿಧಿಸಿ ಆದೇಶ ಹೋರಡಿಸಿದ್ದಾರೆ. 1, ಕೋಟಿ ರೂಗಳಲ್ಲಿ 6,96,70,000 ರೂಗಳನ್ನು ದೂರುದಾರರಿಗೆ ಪರಿಹಾರವಾಗಿ ನೀಡಬೇಕು ಮತ್ತು ರೂ. 10,000 ಗಳನ್ನು ಸರ್ಕಾರಕ್ಕೆ ದಂಡವಾಗಿ ಕಟ್ಟಬೇಕು ಎಂದು ಆದೇಶ ನೀಡಿದಾರೆ.
ಇದರ ಬದಲಿಗೆ ಮುಧು ಬಂಗಾರಪ್ಪ ಅವರು ಕೋರ್ಟ್‌ ಗೆ ಮುಚ್ಚಳಿಕೆ ನೀಡಿದ್ದು, ಇದನ್ನು ಒಪ್ಪಲು ಕೊರ್ಟ್‌ ನಿರಾಕರಿಸಿದೆ. ಈ ಹಿಂದೆಯೂ ಕೋರ್ಟ್‌ ನೀಡಿದ್ದ ಮುಚ್ಚಳಿಕೆಯನ್ನು ಸಚಿವರು ಪಾಲಿಸಿರಿಲಿಲ್ಲ ಹಾಗಾಗಿ ಕೋರ್ಟ್‌ ಅವರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

andolanait

Recent Posts

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

3 hours ago

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

3 hours ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

3 hours ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

3 hours ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

13 hours ago