BREAKING NEWS

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಚೀತಾ ‘ತೇಜಸ್’ ಸಾವು: 5 ತಿಂಗಳಲ್ಲಿ 7ನೇ ಸಾವು

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಮತ್ತೊಂದು ಚಿರತೆ ತೇಜಸ್ ಸಾವನ್ನಪ್ಪಿದೆ. ತೇಜಸ್‌ಗೂ ಮೊದಲು, ಮೂರು ಚಿರತೆಗಳು ಮತ್ತು ಮೂರು ಮರಿಗಳು ಈಗಾಗಲೇ ಉದ್ಯಾನದಲ್ಲಿ ಪ್ರಾಣ ಕಳೆದುಕೊಂಡಿವೆ.

ಸಂಯೋಗದ ಸಮಯದಲ್ಲಿ ಹೆಣ್ಣು ಚಿರತೆ ನಭಾ ಜೊತೆಗಿನ ಘರ್ಷಣೆಯಲ್ಲಿ ತೇಜಸ್‌ಗೆ ಗಾಯಗಳಾಗಿವೆ. ಚಿಕಿತ್ಸೆ ಪಡೆಯುವ ಸಾವನ್ನಪ್ಪಿದೆ. ವನ್ಯಜೀವಿ ಅಧಿಕಾರಿಗಳು ತೇಜಸ್ ಅನ್ನು ಆವರಣದ ಸಂಖ್ಯೆ 6 ರಲ್ಲಿ ಒಂಟಿಯಾಗಿ ಇರಿಸಿದ್ದರು. ಹೆಣ್ಣು ಚಿರತೆ ನಭಾಳನ್ನು ಹತ್ತಿರದ ಆವರಣ ಸಂಖ್ಯೆ 5 ರಲ್ಲಿ ಇರಿಸಿದ್ದರು. ಇವುಗಳ ಸಂಯೋಗವನ್ನು ಸುಲಭಗೊಳಿಸುವ ಪ್ರಯತ್ನದಲ್ಲಿ ಆವರಣದ ಸಂಖ್ಯೆ 5 ರ ಗೇಟ್‌ನ್ನು ತೆರೆದರು. ಈ ಸಂಯೋಗದ ವೇಳೆ ತೇಜಸ್‌ಗೆ ಗಂಭೀರ ಗಾಯಗಳಾಗಿತ್ತು.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಕುನೊ ರಾಷ್ಟ್ರೀಯ ಉದ್ಯಾನವನದ ಮೇಲ್ವಿಚಾರಣಾ ತಂಡದ ಸದಸ್ಯರು ತೇಜಸ್‌ನ ಕುತ್ತಿಗೆಯ ಮೇಲ್ಭಾಗದಲ್ಲಿ ಗಾಯದ ಗುರುತುಗಳನ್ನು ಗಮನಿಸಿದರು. ತೇಜಸ್‌ನನ್ನು ಸ್ಥಳದಲ್ಲೇ ಪರೀಕ್ಷಿಸಿದ ವನ್ಯಜೀವಿ ವೈದ್ಯರು ಗಾಯಗಳು ತೀವ್ರವಾಗಿರುವುದನ್ನು ಪತ್ತೆ ಹಚ್ಚಿ, ಚಿಕಿತ್ಸೆಗೆ ಸಿದ್ಧತೆ ನಡೆಸಿದ್ದಾರೆ. ದುರದೃಷ್ಟವಶಾತ್, ಸರಿಸುಮಾರು ಮಧ್ಯಾಹ್ನ 2:00 ಗಂಟೆಗೆ ತೇಜಸ್ ಮೃತಪಟ್ಟಿದೆ.

ಎರಡು ಚಿರತೆಗಳ ಸೇರ್ಪಡೆ ಮತ್ತು ಈಗ ತೇಜಸ್ ಸಾವಿನೊಂದಿಗೆ, ಕಾಡಿನಲ್ಲಿ ಚೀತಾಗಳ ಒಟ್ಟು ಸಂಖ್ಯೆ 11 ಕ್ಕೆ ತಲುಪಿದೆ. ಕೆಎನ್‌ಪಿಯಲ್ಲಿ ಪ್ರಭಾಷ್ ಮತ್ತು ಪಾವಕ್ ಎಂಬ ಎರಡು ಗಂಡು ಚಿರತೆಗಳನ್ನು ಕಾಡಿಗೆ ಬಿಡಲಾಯಿತು ಎಂದು ಶಿಯೋಪುರದ ವಿಭಾಗೀಯ ಅರಣ್ಯಾಧಿಕಾರಿ ಪಿ ಕೆ ವರ್ಮಾ ತಿಳಿಸಿದರು.

ಭಾರತದಲ್ಲಿ ಚೀತಾ ಜಾತಿಗಳನ್ನು ಮರುಪರಿಚಯಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಭಾಗವಾಗಿ ಐದು ಹೆಣ್ಣು ಮತ್ತು ಮೂರು ಗಂಡುಗಳನ್ನು ಒಳಗೊಂಡ ಎಂಟು ನಮೀಬಿಯಾ ಚಿರತೆಗಳನ್ನು ಕೆಎನ್‌ಪಿಗೆ ಕರೆತಂದು, ಕಳೆದ ವರ್ಷ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಆವರಣಗಳಲ್ಲಿ ಬಿಡುಗಡೆ ಮಾಡಿದರು. ಈ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಕೆಎನ್‌ಪಿಗೆ ಇನ್ನೂ 12 ಚಿರತೆಗಳು ಆಗಮಿಸಿದ್ದವು.

andolanait

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

3 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

3 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

3 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

3 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

3 hours ago