BREAKING NEWS

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಚೀತಾ ‘ತೇಜಸ್’ ಸಾವು: 5 ತಿಂಗಳಲ್ಲಿ 7ನೇ ಸಾವು

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಮತ್ತೊಂದು ಚಿರತೆ ತೇಜಸ್ ಸಾವನ್ನಪ್ಪಿದೆ. ತೇಜಸ್‌ಗೂ ಮೊದಲು, ಮೂರು ಚಿರತೆಗಳು ಮತ್ತು ಮೂರು ಮರಿಗಳು ಈಗಾಗಲೇ ಉದ್ಯಾನದಲ್ಲಿ ಪ್ರಾಣ ಕಳೆದುಕೊಂಡಿವೆ.

ಸಂಯೋಗದ ಸಮಯದಲ್ಲಿ ಹೆಣ್ಣು ಚಿರತೆ ನಭಾ ಜೊತೆಗಿನ ಘರ್ಷಣೆಯಲ್ಲಿ ತೇಜಸ್‌ಗೆ ಗಾಯಗಳಾಗಿವೆ. ಚಿಕಿತ್ಸೆ ಪಡೆಯುವ ಸಾವನ್ನಪ್ಪಿದೆ. ವನ್ಯಜೀವಿ ಅಧಿಕಾರಿಗಳು ತೇಜಸ್ ಅನ್ನು ಆವರಣದ ಸಂಖ್ಯೆ 6 ರಲ್ಲಿ ಒಂಟಿಯಾಗಿ ಇರಿಸಿದ್ದರು. ಹೆಣ್ಣು ಚಿರತೆ ನಭಾಳನ್ನು ಹತ್ತಿರದ ಆವರಣ ಸಂಖ್ಯೆ 5 ರಲ್ಲಿ ಇರಿಸಿದ್ದರು. ಇವುಗಳ ಸಂಯೋಗವನ್ನು ಸುಲಭಗೊಳಿಸುವ ಪ್ರಯತ್ನದಲ್ಲಿ ಆವರಣದ ಸಂಖ್ಯೆ 5 ರ ಗೇಟ್‌ನ್ನು ತೆರೆದರು. ಈ ಸಂಯೋಗದ ವೇಳೆ ತೇಜಸ್‌ಗೆ ಗಂಭೀರ ಗಾಯಗಳಾಗಿತ್ತು.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಕುನೊ ರಾಷ್ಟ್ರೀಯ ಉದ್ಯಾನವನದ ಮೇಲ್ವಿಚಾರಣಾ ತಂಡದ ಸದಸ್ಯರು ತೇಜಸ್‌ನ ಕುತ್ತಿಗೆಯ ಮೇಲ್ಭಾಗದಲ್ಲಿ ಗಾಯದ ಗುರುತುಗಳನ್ನು ಗಮನಿಸಿದರು. ತೇಜಸ್‌ನನ್ನು ಸ್ಥಳದಲ್ಲೇ ಪರೀಕ್ಷಿಸಿದ ವನ್ಯಜೀವಿ ವೈದ್ಯರು ಗಾಯಗಳು ತೀವ್ರವಾಗಿರುವುದನ್ನು ಪತ್ತೆ ಹಚ್ಚಿ, ಚಿಕಿತ್ಸೆಗೆ ಸಿದ್ಧತೆ ನಡೆಸಿದ್ದಾರೆ. ದುರದೃಷ್ಟವಶಾತ್, ಸರಿಸುಮಾರು ಮಧ್ಯಾಹ್ನ 2:00 ಗಂಟೆಗೆ ತೇಜಸ್ ಮೃತಪಟ್ಟಿದೆ.

ಎರಡು ಚಿರತೆಗಳ ಸೇರ್ಪಡೆ ಮತ್ತು ಈಗ ತೇಜಸ್ ಸಾವಿನೊಂದಿಗೆ, ಕಾಡಿನಲ್ಲಿ ಚೀತಾಗಳ ಒಟ್ಟು ಸಂಖ್ಯೆ 11 ಕ್ಕೆ ತಲುಪಿದೆ. ಕೆಎನ್‌ಪಿಯಲ್ಲಿ ಪ್ರಭಾಷ್ ಮತ್ತು ಪಾವಕ್ ಎಂಬ ಎರಡು ಗಂಡು ಚಿರತೆಗಳನ್ನು ಕಾಡಿಗೆ ಬಿಡಲಾಯಿತು ಎಂದು ಶಿಯೋಪುರದ ವಿಭಾಗೀಯ ಅರಣ್ಯಾಧಿಕಾರಿ ಪಿ ಕೆ ವರ್ಮಾ ತಿಳಿಸಿದರು.

ಭಾರತದಲ್ಲಿ ಚೀತಾ ಜಾತಿಗಳನ್ನು ಮರುಪರಿಚಯಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಭಾಗವಾಗಿ ಐದು ಹೆಣ್ಣು ಮತ್ತು ಮೂರು ಗಂಡುಗಳನ್ನು ಒಳಗೊಂಡ ಎಂಟು ನಮೀಬಿಯಾ ಚಿರತೆಗಳನ್ನು ಕೆಎನ್‌ಪಿಗೆ ಕರೆತಂದು, ಕಳೆದ ವರ್ಷ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಆವರಣಗಳಲ್ಲಿ ಬಿಡುಗಡೆ ಮಾಡಿದರು. ಈ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಕೆಎನ್‌ಪಿಗೆ ಇನ್ನೂ 12 ಚಿರತೆಗಳು ಆಗಮಿಸಿದ್ದವು.

andolanait

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

30 mins ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

34 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

40 mins ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

52 mins ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

55 mins ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

1 hour ago