BREAKING NEWS

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಚೀತಾ ‘ತೇಜಸ್’ ಸಾವು: 5 ತಿಂಗಳಲ್ಲಿ 7ನೇ ಸಾವು

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಮತ್ತೊಂದು ಚಿರತೆ ತೇಜಸ್ ಸಾವನ್ನಪ್ಪಿದೆ. ತೇಜಸ್‌ಗೂ ಮೊದಲು, ಮೂರು ಚಿರತೆಗಳು ಮತ್ತು ಮೂರು ಮರಿಗಳು ಈಗಾಗಲೇ ಉದ್ಯಾನದಲ್ಲಿ ಪ್ರಾಣ ಕಳೆದುಕೊಂಡಿವೆ.

ಸಂಯೋಗದ ಸಮಯದಲ್ಲಿ ಹೆಣ್ಣು ಚಿರತೆ ನಭಾ ಜೊತೆಗಿನ ಘರ್ಷಣೆಯಲ್ಲಿ ತೇಜಸ್‌ಗೆ ಗಾಯಗಳಾಗಿವೆ. ಚಿಕಿತ್ಸೆ ಪಡೆಯುವ ಸಾವನ್ನಪ್ಪಿದೆ. ವನ್ಯಜೀವಿ ಅಧಿಕಾರಿಗಳು ತೇಜಸ್ ಅನ್ನು ಆವರಣದ ಸಂಖ್ಯೆ 6 ರಲ್ಲಿ ಒಂಟಿಯಾಗಿ ಇರಿಸಿದ್ದರು. ಹೆಣ್ಣು ಚಿರತೆ ನಭಾಳನ್ನು ಹತ್ತಿರದ ಆವರಣ ಸಂಖ್ಯೆ 5 ರಲ್ಲಿ ಇರಿಸಿದ್ದರು. ಇವುಗಳ ಸಂಯೋಗವನ್ನು ಸುಲಭಗೊಳಿಸುವ ಪ್ರಯತ್ನದಲ್ಲಿ ಆವರಣದ ಸಂಖ್ಯೆ 5 ರ ಗೇಟ್‌ನ್ನು ತೆರೆದರು. ಈ ಸಂಯೋಗದ ವೇಳೆ ತೇಜಸ್‌ಗೆ ಗಂಭೀರ ಗಾಯಗಳಾಗಿತ್ತು.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಕುನೊ ರಾಷ್ಟ್ರೀಯ ಉದ್ಯಾನವನದ ಮೇಲ್ವಿಚಾರಣಾ ತಂಡದ ಸದಸ್ಯರು ತೇಜಸ್‌ನ ಕುತ್ತಿಗೆಯ ಮೇಲ್ಭಾಗದಲ್ಲಿ ಗಾಯದ ಗುರುತುಗಳನ್ನು ಗಮನಿಸಿದರು. ತೇಜಸ್‌ನನ್ನು ಸ್ಥಳದಲ್ಲೇ ಪರೀಕ್ಷಿಸಿದ ವನ್ಯಜೀವಿ ವೈದ್ಯರು ಗಾಯಗಳು ತೀವ್ರವಾಗಿರುವುದನ್ನು ಪತ್ತೆ ಹಚ್ಚಿ, ಚಿಕಿತ್ಸೆಗೆ ಸಿದ್ಧತೆ ನಡೆಸಿದ್ದಾರೆ. ದುರದೃಷ್ಟವಶಾತ್, ಸರಿಸುಮಾರು ಮಧ್ಯಾಹ್ನ 2:00 ಗಂಟೆಗೆ ತೇಜಸ್ ಮೃತಪಟ್ಟಿದೆ.

ಎರಡು ಚಿರತೆಗಳ ಸೇರ್ಪಡೆ ಮತ್ತು ಈಗ ತೇಜಸ್ ಸಾವಿನೊಂದಿಗೆ, ಕಾಡಿನಲ್ಲಿ ಚೀತಾಗಳ ಒಟ್ಟು ಸಂಖ್ಯೆ 11 ಕ್ಕೆ ತಲುಪಿದೆ. ಕೆಎನ್‌ಪಿಯಲ್ಲಿ ಪ್ರಭಾಷ್ ಮತ್ತು ಪಾವಕ್ ಎಂಬ ಎರಡು ಗಂಡು ಚಿರತೆಗಳನ್ನು ಕಾಡಿಗೆ ಬಿಡಲಾಯಿತು ಎಂದು ಶಿಯೋಪುರದ ವಿಭಾಗೀಯ ಅರಣ್ಯಾಧಿಕಾರಿ ಪಿ ಕೆ ವರ್ಮಾ ತಿಳಿಸಿದರು.

ಭಾರತದಲ್ಲಿ ಚೀತಾ ಜಾತಿಗಳನ್ನು ಮರುಪರಿಚಯಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಭಾಗವಾಗಿ ಐದು ಹೆಣ್ಣು ಮತ್ತು ಮೂರು ಗಂಡುಗಳನ್ನು ಒಳಗೊಂಡ ಎಂಟು ನಮೀಬಿಯಾ ಚಿರತೆಗಳನ್ನು ಕೆಎನ್‌ಪಿಗೆ ಕರೆತಂದು, ಕಳೆದ ವರ್ಷ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಆವರಣಗಳಲ್ಲಿ ಬಿಡುಗಡೆ ಮಾಡಿದರು. ಈ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಕೆಎನ್‌ಪಿಗೆ ಇನ್ನೂ 12 ಚಿರತೆಗಳು ಆಗಮಿಸಿದ್ದವು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

9 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

9 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

9 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

9 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

10 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

10 hours ago