BREAKING NEWS

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಚೀತಾ ‘ತೇಜಸ್’ ಸಾವು: 5 ತಿಂಗಳಲ್ಲಿ 7ನೇ ಸಾವು

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಮತ್ತೊಂದು ಚಿರತೆ ತೇಜಸ್ ಸಾವನ್ನಪ್ಪಿದೆ. ತೇಜಸ್‌ಗೂ ಮೊದಲು, ಮೂರು ಚಿರತೆಗಳು ಮತ್ತು ಮೂರು ಮರಿಗಳು ಈಗಾಗಲೇ ಉದ್ಯಾನದಲ್ಲಿ ಪ್ರಾಣ ಕಳೆದುಕೊಂಡಿವೆ.

ಸಂಯೋಗದ ಸಮಯದಲ್ಲಿ ಹೆಣ್ಣು ಚಿರತೆ ನಭಾ ಜೊತೆಗಿನ ಘರ್ಷಣೆಯಲ್ಲಿ ತೇಜಸ್‌ಗೆ ಗಾಯಗಳಾಗಿವೆ. ಚಿಕಿತ್ಸೆ ಪಡೆಯುವ ಸಾವನ್ನಪ್ಪಿದೆ. ವನ್ಯಜೀವಿ ಅಧಿಕಾರಿಗಳು ತೇಜಸ್ ಅನ್ನು ಆವರಣದ ಸಂಖ್ಯೆ 6 ರಲ್ಲಿ ಒಂಟಿಯಾಗಿ ಇರಿಸಿದ್ದರು. ಹೆಣ್ಣು ಚಿರತೆ ನಭಾಳನ್ನು ಹತ್ತಿರದ ಆವರಣ ಸಂಖ್ಯೆ 5 ರಲ್ಲಿ ಇರಿಸಿದ್ದರು. ಇವುಗಳ ಸಂಯೋಗವನ್ನು ಸುಲಭಗೊಳಿಸುವ ಪ್ರಯತ್ನದಲ್ಲಿ ಆವರಣದ ಸಂಖ್ಯೆ 5 ರ ಗೇಟ್‌ನ್ನು ತೆರೆದರು. ಈ ಸಂಯೋಗದ ವೇಳೆ ತೇಜಸ್‌ಗೆ ಗಂಭೀರ ಗಾಯಗಳಾಗಿತ್ತು.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಕುನೊ ರಾಷ್ಟ್ರೀಯ ಉದ್ಯಾನವನದ ಮೇಲ್ವಿಚಾರಣಾ ತಂಡದ ಸದಸ್ಯರು ತೇಜಸ್‌ನ ಕುತ್ತಿಗೆಯ ಮೇಲ್ಭಾಗದಲ್ಲಿ ಗಾಯದ ಗುರುತುಗಳನ್ನು ಗಮನಿಸಿದರು. ತೇಜಸ್‌ನನ್ನು ಸ್ಥಳದಲ್ಲೇ ಪರೀಕ್ಷಿಸಿದ ವನ್ಯಜೀವಿ ವೈದ್ಯರು ಗಾಯಗಳು ತೀವ್ರವಾಗಿರುವುದನ್ನು ಪತ್ತೆ ಹಚ್ಚಿ, ಚಿಕಿತ್ಸೆಗೆ ಸಿದ್ಧತೆ ನಡೆಸಿದ್ದಾರೆ. ದುರದೃಷ್ಟವಶಾತ್, ಸರಿಸುಮಾರು ಮಧ್ಯಾಹ್ನ 2:00 ಗಂಟೆಗೆ ತೇಜಸ್ ಮೃತಪಟ್ಟಿದೆ.

ಎರಡು ಚಿರತೆಗಳ ಸೇರ್ಪಡೆ ಮತ್ತು ಈಗ ತೇಜಸ್ ಸಾವಿನೊಂದಿಗೆ, ಕಾಡಿನಲ್ಲಿ ಚೀತಾಗಳ ಒಟ್ಟು ಸಂಖ್ಯೆ 11 ಕ್ಕೆ ತಲುಪಿದೆ. ಕೆಎನ್‌ಪಿಯಲ್ಲಿ ಪ್ರಭಾಷ್ ಮತ್ತು ಪಾವಕ್ ಎಂಬ ಎರಡು ಗಂಡು ಚಿರತೆಗಳನ್ನು ಕಾಡಿಗೆ ಬಿಡಲಾಯಿತು ಎಂದು ಶಿಯೋಪುರದ ವಿಭಾಗೀಯ ಅರಣ್ಯಾಧಿಕಾರಿ ಪಿ ಕೆ ವರ್ಮಾ ತಿಳಿಸಿದರು.

ಭಾರತದಲ್ಲಿ ಚೀತಾ ಜಾತಿಗಳನ್ನು ಮರುಪರಿಚಯಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಭಾಗವಾಗಿ ಐದು ಹೆಣ್ಣು ಮತ್ತು ಮೂರು ಗಂಡುಗಳನ್ನು ಒಳಗೊಂಡ ಎಂಟು ನಮೀಬಿಯಾ ಚಿರತೆಗಳನ್ನು ಕೆಎನ್‌ಪಿಗೆ ಕರೆತಂದು, ಕಳೆದ ವರ್ಷ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಆವರಣಗಳಲ್ಲಿ ಬಿಡುಗಡೆ ಮಾಡಿದರು. ಈ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಕೆಎನ್‌ಪಿಗೆ ಇನ್ನೂ 12 ಚಿರತೆಗಳು ಆಗಮಿಸಿದ್ದವು.

andolanait

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

6 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

11 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

17 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago