ಚೆನ್ನೈ : ಬೆಂಗಳೂರು ಎಕ್ಸ್ಪ್ರೆಸ್ ರೈಲು ಸೋಮವಾರ ಹಳಿ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್ಪ್ರೆಸ್ ರೈಲು ಬಂಗಾರಪೇಟೆ ಬಳಿ ಬೆಳಿಗ್ಗೆ 11.29 ರ ಸುಮಾರಿಗೆ ಹಳಿ ತಪ್ಪಿತ್ತು. ಕೋಲಾರದ ಬಂಗಾರ ಪೇಟೆಯಿಂದ 20 ಕಿ.ಮೀ ದೂರದಲ್ಲಿ ಘಟನೆ ನಡೆದಿದೆ.
ನೈಋತ್ಯ ರೈಲ್ವೆಯ (SWR) ಪತ್ರಿಕಾ ಹೇಳಿಕೆಯ ಪ್ರಕಾರ, ಯಾವುದೇ ಸಾವು ನೋವುಗಳು ವರದಿಯಾಗಿಲ್ಲ ದುರಸ್ತಿ ಕಾರ್ಯ ನಡೆಯುತ್ತಿದೆ. ರೈಲು 22625 ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್ಪ್ರೆಸ್ ಬೆಂಗಳೂರು ವಿಭಾಗದ ಬಿಸನಟ್ಟಂ ಬಳಿ, ಜೋಲಾರ್ಪೆಟ್ಟೈ ಜೂನಿಂದ 50 ಕಿಮೀ ದೂರದಲ್ಲಿ ಹಳಿತಪ್ಪಿತು.
ಚೆನ್ನೈನಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡವು ಸ್ಥಳಕ್ಕೆ ಧಾವಿಸುತ್ತಿದ್ದು, ಜೋಲಾರ್ಪೆಟ್ಟೈ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ತಲುಪಿದ್ದಾರೆ ಎಂದು ಚೆನ್ನೈ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್ಒ) ಎ ಏಳುಮಲೈ ಹೇಳಿದರು.
ಪ್ರಯಾಣಿಕರಿಗೆ ಆಹಾರ ಮತ್ತು ಸಾರಿಗೆಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡುವುದರ ಮೂಲಕ ಕಾಳಜಿ ವಹಿಸಲಾಗುತ್ತಿದೆ. ಅಪಘಾತ ಪರಿಹಾರ ರೈಲುಗಳು ಮತ್ತು ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸುವುದರೊಂದಿಗೆ ಪುನಃಸ್ಥಾಪನೆ ಕಾರ್ಯಗಳು ಸಹ ಭರದಿಂದ ಸಾಗುತ್ತಿವೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…