ಬೆಂಗಳೂರು : ಮಂಡ್ಯ ನಿಲ್ದಾಣ ಹತ್ತಿರದ ಲೆವಲ್ ಕ್ರಾಸ್ ಗೇಟ್– 73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಜುಲೈ 16 ರಿಂದ 31 ರವರೆಗೆ 20 ರೈಲುಗಳನ್ನು ರದ್ದು/ಭಾಗಶಃ ರದ್ದು/ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ. ಈ ಮಧ್ಯೆ ರೈಲ್ವೆ ಇಲಾಖೆ ಈ ಬಗ್ಗೆ ಪ್ರಯಾಣಿಕರಿಗೆ ಸರಿಯಾಗಿ ಮಾಹಿತಿ ನೀಡದ ಕಾರಣ ಚೆನ್ನೈ ಸೆಂಟ್ರಲ್- ಮೈಸೂರು ಎಕ್ಸ್ಪ್ರೆಸ್ ರೈಲಿನ ನೂರಾರು ಪ್ರಯಾಣಿಕರು ಸೋಮವಾರ ಬೆಳಿಗ್ಗೆ ಮದ್ದೂರು ರೈಲ್ವೆ ನಿಲ್ದಾಣದಲ್ಲಿ ಪರದಾಡುವಂತಾಯಿತು.
ಜುಲೈ 30 ರಂದು ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ನಿಂದ ಪ್ರಾರಂಭವಾಗುವ ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಮೈಸೂರು ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 90 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ ಎಂದು ರೈಲ್ವೆ ಪ್ರಕಟಣೆ ಹೊರಡಿಸಿತ್ತು. ಆದರೆ ಸೋಮವಾರ ಬೆಳಗಿನ ಜಾವ ರಾಮನಗರಕ್ಕೆ ಬಂದ ರೈಲು ಅಲ್ಲಿ ಒಂದು ಗಂಟೆ ನಿಂತು, ಬಳಿಕ 7 ಗಂಟೆಗೆ ಮದ್ದೂರಿಗೆ ಬಂದು ಬೆಳಿಗ್ಗೆ 9 ಗಂಟೆಯಾದರೂ ಅಲ್ಲಿಂದ ಮುಂದಕ್ಕೆ ಚಲಿಸಲಿಲ್ಲ. ಇದರಿಂದ ರೈಲಿನಲ್ಲಿದ್ದ ನೂರಾರು ಪ್ರಯಾಣಿಕರು ಪರದಾಡುವಂತಾಯಿತು.
ರಾತ್ರಿ 9.15ಕ್ಕೆ ಚೆನ್ನೈ ಬಿಟ್ಟ ಈ ರೈಲು ಬೆಳಗ್ಗೆ 6ಕ್ಕೆ ಮೈಸೂರಿಗೆ ಬರಬೇಕಿತ್ತು. ಬೆಂಗಳೂರಿನಿಂದ ಮೈಸೂರಿಗೆ ಟಿಕೆಟ್ ಪಡೆದು ರೈಲು ಹತ್ತಿದ ನೂರಾರು ಪ್ರಯಾಣಿಕರು ರೈಲೈ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದರು. ರೈಲು ವಿಳಂಬವಾಗುವ ಸಾಧ್ಯತೆ ಬಗ್ಗೆ ಟಿಕೆಟ್ ಕೌಂಟರ್ ನಲ್ಲಿಯೇ ಮಾಹಿತಿ ನೀಡಿದ್ದರೆ ನಾವು ಅರ್ಧ ದಾರಿಯಲ್ಲಿ ಬಂದು ಪರದಾಡುವ ಪರಿಸ್ಥಿತಿ ಇರುತ್ತಿರಲಿಲ್ಲ. ತುರ್ತು ಕೆಲಸಕ್ಕೆಂದು ಬೆಳಗ್ಗಿನ ಜಾವ ರೈಲು ಹಿಡಿದು ಸಂಕಷ್ಟ ಎದುರಿಸುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರು ರೈಲು ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಅಧಿಕಾರಿಗಳ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಬದಲಿ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು.
• ರೈಲು ಸಂಖ್ಯೆ 06559 ಕೆ.ಎಸ್.ಆರ್ ಬೆಂಗಳೂರು – ಮೈಸೂರು ಮೆಮು ರೈಲನ್ನು ಜುಲೈ 31 ರಂದು ಮದ್ದೂರು-ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ಈ ರೈಲು ಮದ್ದೂರು ನಿಲ್ದಾಣದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.
• ರೈಲು ಸಂಖ್ಯೆ 06256 ಮೈಸೂರು – ಕೆ.ಎಸ್.ಆರ್ ಬೆಂಗಳೂರು ಮೆಮು ರೈಲನ್ನು ಕೂಡ 31 ರಂದು ಮೈಸೂರು-ಮದ್ದೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಮದ್ದೂರು ನಿಲ್ದಾಣದಿಂದ ಹೊರಡಲಿದೆ.
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…