ಬೆಂಗಳೂರು : ಮಂಡ್ಯ ನಿಲ್ದಾಣ ಹತ್ತಿರದ ಲೆವಲ್ ಕ್ರಾಸ್ ಗೇಟ್– 73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಜುಲೈ 16 ರಿಂದ 31 ರವರೆಗೆ 20 ರೈಲುಗಳನ್ನು ರದ್ದು/ಭಾಗಶಃ ರದ್ದು/ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ. ಈ ಮಧ್ಯೆ ರೈಲ್ವೆ ಇಲಾಖೆ ಈ ಬಗ್ಗೆ ಪ್ರಯಾಣಿಕರಿಗೆ ಸರಿಯಾಗಿ ಮಾಹಿತಿ ನೀಡದ ಕಾರಣ ಚೆನ್ನೈ ಸೆಂಟ್ರಲ್- ಮೈಸೂರು ಎಕ್ಸ್ಪ್ರೆಸ್ ರೈಲಿನ ನೂರಾರು ಪ್ರಯಾಣಿಕರು ಸೋಮವಾರ ಬೆಳಿಗ್ಗೆ ಮದ್ದೂರು ರೈಲ್ವೆ ನಿಲ್ದಾಣದಲ್ಲಿ ಪರದಾಡುವಂತಾಯಿತು.
ಜುಲೈ 30 ರಂದು ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ನಿಂದ ಪ್ರಾರಂಭವಾಗುವ ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಮೈಸೂರು ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 90 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ ಎಂದು ರೈಲ್ವೆ ಪ್ರಕಟಣೆ ಹೊರಡಿಸಿತ್ತು. ಆದರೆ ಸೋಮವಾರ ಬೆಳಗಿನ ಜಾವ ರಾಮನಗರಕ್ಕೆ ಬಂದ ರೈಲು ಅಲ್ಲಿ ಒಂದು ಗಂಟೆ ನಿಂತು, ಬಳಿಕ 7 ಗಂಟೆಗೆ ಮದ್ದೂರಿಗೆ ಬಂದು ಬೆಳಿಗ್ಗೆ 9 ಗಂಟೆಯಾದರೂ ಅಲ್ಲಿಂದ ಮುಂದಕ್ಕೆ ಚಲಿಸಲಿಲ್ಲ. ಇದರಿಂದ ರೈಲಿನಲ್ಲಿದ್ದ ನೂರಾರು ಪ್ರಯಾಣಿಕರು ಪರದಾಡುವಂತಾಯಿತು.
ರಾತ್ರಿ 9.15ಕ್ಕೆ ಚೆನ್ನೈ ಬಿಟ್ಟ ಈ ರೈಲು ಬೆಳಗ್ಗೆ 6ಕ್ಕೆ ಮೈಸೂರಿಗೆ ಬರಬೇಕಿತ್ತು. ಬೆಂಗಳೂರಿನಿಂದ ಮೈಸೂರಿಗೆ ಟಿಕೆಟ್ ಪಡೆದು ರೈಲು ಹತ್ತಿದ ನೂರಾರು ಪ್ರಯಾಣಿಕರು ರೈಲೈ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದರು. ರೈಲು ವಿಳಂಬವಾಗುವ ಸಾಧ್ಯತೆ ಬಗ್ಗೆ ಟಿಕೆಟ್ ಕೌಂಟರ್ ನಲ್ಲಿಯೇ ಮಾಹಿತಿ ನೀಡಿದ್ದರೆ ನಾವು ಅರ್ಧ ದಾರಿಯಲ್ಲಿ ಬಂದು ಪರದಾಡುವ ಪರಿಸ್ಥಿತಿ ಇರುತ್ತಿರಲಿಲ್ಲ. ತುರ್ತು ಕೆಲಸಕ್ಕೆಂದು ಬೆಳಗ್ಗಿನ ಜಾವ ರೈಲು ಹಿಡಿದು ಸಂಕಷ್ಟ ಎದುರಿಸುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರು ರೈಲು ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಅಧಿಕಾರಿಗಳ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಬದಲಿ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು.
• ರೈಲು ಸಂಖ್ಯೆ 06559 ಕೆ.ಎಸ್.ಆರ್ ಬೆಂಗಳೂರು – ಮೈಸೂರು ಮೆಮು ರೈಲನ್ನು ಜುಲೈ 31 ರಂದು ಮದ್ದೂರು-ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ಈ ರೈಲು ಮದ್ದೂರು ನಿಲ್ದಾಣದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.
• ರೈಲು ಸಂಖ್ಯೆ 06256 ಮೈಸೂರು – ಕೆ.ಎಸ್.ಆರ್ ಬೆಂಗಳೂರು ಮೆಮು ರೈಲನ್ನು ಕೂಡ 31 ರಂದು ಮೈಸೂರು-ಮದ್ದೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಮದ್ದೂರು ನಿಲ್ದಾಣದಿಂದ ಹೊರಡಲಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…