BREAKING NEWS

ಮದ್ದೂರಿನಲ್ಲಿ ಪ್ರಯಾಣ ಸ್ಥಗಿತಗೊಳಿಸಿದ ಚೆನ್ನೈ ಎಕ್ಸ್ಪ್ರೆಸ್: ನೂರಾರು ಪ್ರಯಾಣಿಕರ ಪರದಾಟ

ಬೆಂಗಳೂರು : ಮಂಡ್ಯ ನಿಲ್ದಾಣ ಹತ್ತಿರದ ಲೆವಲ್ ಕ್ರಾಸ್ ಗೇಟ್– 73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಜುಲೈ 16 ರಿಂದ 31 ರವರೆಗೆ 20 ರೈಲುಗಳನ್ನು ರದ್ದು/ಭಾಗಶಃ ರದ್ದು/ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ. ಈ ಮಧ್ಯೆ ರೈಲ್ವೆ ಇಲಾಖೆ ಈ ಬಗ್ಗೆ ಪ್ರಯಾಣಿಕರಿಗೆ ಸರಿಯಾಗಿ ಮಾಹಿತಿ ನೀಡದ ಕಾರಣ ಚೆನ್ನೈ ಸೆಂಟ್ರಲ್- ಮೈಸೂರು ಎಕ್ಸ್ಪ್ರೆಸ್ ರೈಲಿನ ನೂರಾರು ಪ್ರಯಾಣಿಕರು ಸೋಮವಾರ ಬೆಳಿಗ್ಗೆ ಮದ್ದೂರು ರೈಲ್ವೆ ನಿಲ್ದಾಣದಲ್ಲಿ ಪರದಾಡುವಂತಾಯಿತು.

ಜುಲೈ 30 ರಂದು ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ನಿಂದ ಪ್ರಾರಂಭವಾಗುವ ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಮೈಸೂರು ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 90 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ ಎಂದು ರೈಲ್ವೆ ಪ್ರಕಟಣೆ ಹೊರಡಿಸಿತ್ತು. ಆದರೆ ಸೋಮವಾರ ಬೆಳಗಿನ ಜಾವ ರಾಮನಗರಕ್ಕೆ ಬಂದ ರೈಲು ಅಲ್ಲಿ ಒಂದು ಗಂಟೆ ನಿಂತು, ಬಳಿಕ 7 ಗಂಟೆಗೆ ಮದ್ದೂರಿಗೆ ಬಂದು ಬೆಳಿಗ್ಗೆ 9 ಗಂಟೆಯಾದರೂ ಅಲ್ಲಿಂದ ಮುಂದಕ್ಕೆ ಚಲಿಸಲಿಲ್ಲ. ಇದರಿಂದ ರೈಲಿನಲ್ಲಿದ್ದ ನೂರಾರು ಪ್ರಯಾಣಿಕರು ಪರದಾಡುವಂತಾಯಿತು.

ರಾತ್ರಿ 9.15ಕ್ಕೆ ಚೆನ್ನೈ ಬಿಟ್ಟ ಈ ರೈಲು ಬೆಳಗ್ಗೆ 6ಕ್ಕೆ ಮೈಸೂರಿಗೆ ಬರಬೇಕಿತ್ತು. ಬೆಂಗಳೂರಿನಿಂದ ಮೈಸೂರಿಗೆ ಟಿಕೆಟ್ ಪಡೆದು ರೈಲು ಹತ್ತಿದ ನೂರಾರು ಪ್ರಯಾಣಿಕರು ರೈಲೈ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದರು. ರೈಲು ವಿಳಂಬವಾಗುವ ಸಾಧ್ಯತೆ ಬಗ್ಗೆ ಟಿಕೆಟ್ ಕೌಂಟರ್ ನಲ್ಲಿಯೇ ಮಾಹಿತಿ ನೀಡಿದ್ದರೆ ನಾವು ಅರ್ಧ ದಾರಿಯಲ್ಲಿ ಬಂದು ಪರದಾಡುವ ಪರಿಸ್ಥಿತಿ ಇರುತ್ತಿರಲಿಲ್ಲ. ತುರ್ತು ಕೆಲಸಕ್ಕೆಂದು ಬೆಳಗ್ಗಿನ ಜಾವ ರೈಲು ಹಿಡಿದು ಸಂಕಷ್ಟ ಎದುರಿಸುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮದ್ದೂರು ರೈಲು ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಅಧಿಕಾರಿಗಳ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಬದಲಿ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು.

• ರೈಲು ಸಂಖ್ಯೆ 06559 ಕೆ.ಎಸ್.ಆರ್ ಬೆಂಗಳೂರು – ಮೈಸೂರು ಮೆಮು ರೈಲನ್ನು ಜುಲೈ 31 ರಂದು ಮದ್ದೂರು-ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ಈ ರೈಲು ಮದ್ದೂರು ನಿಲ್ದಾಣದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.

• ರೈಲು ಸಂಖ್ಯೆ 06256 ಮೈಸೂರು – ಕೆ.ಎಸ್.ಆರ್ ಬೆಂಗಳೂರು ಮೆಮು ರೈಲನ್ನು ಕೂಡ 31 ರಂದು ಮೈಸೂರು-ಮದ್ದೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಮದ್ದೂರು ನಿಲ್ದಾಣದಿಂದ ಹೊರಡಲಿದೆ.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

8 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

8 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

8 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

10 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

12 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

13 hours ago