ಚೆನ್ನೈ : ವರುಣನ ಅಬ್ಬರಕ್ಕೆ ಚೆನ್ನೈ ಅಕ್ಷರಶಃ ತತ್ತರಿಸಿ ಹೋಗಿದೆ. ಮಿಚಾಂಗ್ ಚಂಡಮಾರುತದಿಂದಾಗಿ ಚೆನ್ನೈನಲ್ಲಿ ಮಳೆರಾಯ ಎಡಬಿಡದೆ ಸುರಿಯುತ್ತಿದ್ದಾನೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿ ಹೋಗಿದೆ.
ಮಳೆರಾಯನ ಆರ್ಭಟಕ್ಕೆ ಮನೆಯ ಗೋಡೆ ಕುಸಿತವಾಗಿದ್ದು,ಇಬ್ಬರು ಸಾವಿಗೀಡಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ಚನ್ನೈಗೆ ಸಂಚರಿಸುವ ರೈಲು ಹಾಗೂ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹಾಗಾಗಿ ಚೆನ್ನೈಗೆ ತೆರಳುವ ಪ್ರಯಾಣಿಕರು ಕಾರು ಅಥವಾ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ.
ಸದ್ಯ ತಮಿಳುನಾಡು ಸರ್ಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ರಕ್ಷಣಾ ಕರ್ಯವನ್ನು ಕೈಗೊಂಡಿದೆ. ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣವಾಗಿ ಜಲಾವೃತ್ತವಾಗಿದ್ದು, ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.
ಮಳೆರಾಯನ ರೌದ್ರ ನರ್ತನಕ್ಕೆ ಚೆನ್ನೈ ನ ಮರೀನಾ ಬೀಚ್ ಮುಳುಗಡೆಯಾಗಿದ್ದು, ಮನೆಗಳಿಗೂ ಸಹ ನೀರು ನುಗ್ಗಿದೆ. ಜನರು ತುರ್ತು ಅವಶ್ಯಕತೆಗಳಿಗೂ ಕೂಡ ಹೊರಪರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಶಾಲಾ ಕಾಲೇಜುಗಳಿಗೂ ಸಹ ರಜೆ ಘೋಷಣೆ ಮಾಡಲಾಗಿದೆ.
ಇನ್ನು ಚೆನ್ನೈನಲ್ಲಿ ಎದ್ದಿರುವ ಮಿಚಾಂಗ್ ಚಂಡಮಾರುತದಿಂದಾಗಿ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಬೆಂಗಳೂರು, ಮೈಸೂರು,ಚಾಮರಾಜನಗರ ಸೇರಿದಂತೆ ಇತರೆ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…