BREAKING NEWS

ವರುಣನ ಅಬ್ಬರಕ್ಕೆ ತತ್ತರಿಸಿದ ಚೆನ್ನೈ : 11 ರೈಲು, 27 ವಿಮಾನಗಳ ಸಂಚಾರ ರದ್ದು

ಚೆನ್ನೈ : ವರುಣನ ಅಬ್ಬರಕ್ಕೆ ಚೆನ್ನೈ ಅಕ್ಷರಶಃ ತತ್ತರಿಸಿ ಹೋಗಿದೆ. ಮಿಚಾಂಗ್‌ ಚಂಡಮಾರುತದಿಂದಾಗಿ ಚೆನ್ನೈನಲ್ಲಿ ಮಳೆರಾಯ ಎಡಬಿಡದೆ ಸುರಿಯುತ್ತಿದ್ದಾನೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿ ಹೋಗಿದೆ.

ಮಳೆರಾಯನ ಆರ್ಭಟಕ್ಕೆ ಮನೆಯ ಗೋಡೆ ಕುಸಿತವಾಗಿದ್ದು,ಇಬ್ಬರು ಸಾವಿಗೀಡಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ಚನ್ನೈಗೆ ಸಂಚರಿಸುವ ರೈಲು ಹಾಗೂ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹಾಗಾಗಿ ಚೆನ್ನೈಗೆ ತೆರಳುವ ಪ್ರಯಾಣಿಕರು ಕಾರು ಅಥವಾ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

ಸದ್ಯ ತಮಿಳುನಾಡು ಸರ್ಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ರಕ್ಷಣಾ ಕರ್ಯವನ್ನು ಕೈಗೊಂಡಿದೆ. ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣವಾಗಿ ಜಲಾವೃತ್ತವಾಗಿದ್ದು, ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಮಳೆರಾಯನ ರೌದ್ರ ನರ್ತನಕ್ಕೆ ಚೆನ್ನೈ ನ ಮರೀನಾ ಬೀಚ್‌ ಮುಳುಗಡೆಯಾಗಿದ್ದು, ಮನೆಗಳಿಗೂ ಸಹ ನೀರು ನುಗ್ಗಿದೆ. ಜನರು ತುರ್ತು ಅವಶ್ಯಕತೆಗಳಿಗೂ ಕೂಡ ಹೊರಪರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಶಾಲಾ ಕಾಲೇಜುಗಳಿಗೂ ಸಹ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಚೆನ್ನೈನಲ್ಲಿ ಎದ್ದಿರುವ ಮಿಚಾಂಗ್‌ ಚಂಡಮಾರುತದಿಂದಾಗಿ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಬೆಂಗಳೂರು, ಮೈಸೂರು,ಚಾಮರಾಜನಗರ ಸೇರಿದಂತೆ ಇತರೆ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

lokesh

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

4 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

7 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

7 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

9 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

10 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

11 hours ago