BREAKING NEWS

ಎಎಪಿ ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ!

ಬೆಂಗಳೂರು : ದಿಲ್ಲಿ, ಪಂಜಾಬ್‌ ಬಳಿಕ ಕರ್ನಾಟಕದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಆಮ್‌ ಆದ್ಮಿ ಪಕ್ಷದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಆಮ್‌ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುಂಚೆ ಈ ಬೆಳವಣಿಗೆಯಾಗಿರುವುದು ಪಕ್ಷ ಸಂಘಟನೆಗೆ ಮತ್ತಷ್ಟು ಚುರುಕು ಬರುವ ಸಾಧ್ಯತೆ ಇದೆ.

ಈವರೆಗೂ ಎಎಪಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಎಎಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್‌ ಪಾಠಕ್‌ ದಿಲ್ಲಿಯಲ್ಲಿ ಬುಧವಾರ ರಾತ್ರಿ ಘೋಷಣೆ ಮಾಡಿದ್ದಾರೆ. ರಾಜ್ಯಾಧ್ಯಕ್ಷರ ಜೊತೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿಟಿ ನಾಗಣ್ಣ ಮತ್ತು ಅರ್ಜುನ್ ಹಲಗಿಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷ ಅಧಿಕೃತವಾಗಿ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಪೃಥ್ವಿ ರೆಡ್ಡಿ, ಪಕ್ಷದ ನೂತನ ರಾಜ್ಯಾಧ್ಯಕ್ಷ ನೇಮಕವಾದ ಮುಖ್ಯಮಂತ್ರಿ ಚಂದ್ರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಪಕ್ಷವನ್ನು ಸೇರಿದ್ದರು. ಆದರೆ, ಯಾವುದೇ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಇದೀಗ ಅವರನ್ನು ಎಎಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಚಂದ್ರು ರಾಜಕೀಯ ಜೀವನ!

ಮುಖ್ಯಮಂತ್ರಿ ಚಂದ್ರು ಅವರು ಜನತಾ ಪಕ್ಷದ ಮೂಲಕ ಗೌರಿಬಿದನೂರಿನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ವಿಧಾನಸೌಧದಲ್ಲಿ ಅನೇಕ ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಗಮನ ಸೆಳೆದಿದ್ದರು. ಆ ಚುನಾವಣೆಯಲ್ಲಿ ಅನಂತನಾಗ್‌, ಶಂಕರ್‌ನಾಗ್‌ ಅವರು ಟಿಕೆಟ್‌ ತಿರಸ್ಕರಿಸಿದ ಕಾರಣ ಮುಖ್ಯಮಂತ್ರಿ ಚಂದ್ರುಗೆ ಟಿಕೆಟ್‌ ಸಿಕ್ಕಿತ್ತು. ಆದರೆ, 1989ರಲ್ಲಿ ಜನತಾ ದಳದೊಂದಿಗೆ ಜನತಾ ಪಕ್ಷ ವಿಲೀನವಾಯ್ತು.

ಬಳಿಕ ರಾಮಕೃಷ್ಣ ಹೆಗಡೆ ಮತ್ತು ಎಚ್‌ಡಿ ದೇವೇಗೌಡ ಅವರ ನಡುವೆ ಭಿನ್ನಮತದ ಕಾರಣ 1991ರಲ್ಲಿ ಜನತಾ ದಳ ತೊರೆದ ಮುಖ್ಯಮಂತ್ರಿ ಚಂದ್ರು ಬಿಜೆಪಿ ಸೇರಿದರು. 1998 ಹಾಗೂ 2004ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್‌ ಸದಸ್ಯರಾಗಿ ನೇಮಕವಾಗಿದ್ದರು. 2008ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿದ್ದರು. 2013ರಲ್ಲಿ ಬಿಜೆಪಿಯನ್ನು ತೊರೆದ ಅವರು 2014ರಲ್ಲಿ ಕಾಂಗ್ರೆಸ್‌ ಸೇರಿದರು. ಆದರೆ, 2022ರಲ್ಲಿ ಪರಿಷತ್‌ ಸದಸ್ಯರನ್ನಾಗಿ ನೇಮಕ ಮಾಡದ ಕಾರಣ ಕಾಂಗ್ರೆಸ್‌ ತೊರೆದು ಆಮ್‌ ಆದ್ಮಿ ಪಕ್ಷವನ್ನು ಸೇರಿದ್ದರು.

andolanait

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

6 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

57 mins ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

3 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

3 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

4 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

5 hours ago