ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು.
ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆಯ ವೇಳೆ ಜೈನಮುನಿಯ ಹತ್ಯೆಯಾಗಿರುವುದು ಬಯಲಾಗಿದೆ.
ತನಿಖೆ ಸಂದರ್ಭದಲ್ಲಿ ರಾತ್ರಿಯಿಡೀ ಇಬ್ಬರು ಆರೋಪಿಗಳು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ನೀಡದೇ ಸತಾಯಿಸಿದ್ದರು.
ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದಿದ್ದೇವೆ ಎಂದಿದ್ದರು. ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದರು. ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ ಪೊಲೀಸರಿಗೆ ಶವ ದೊರೆತಿಲ್ಲ. ಇಂದು ಬೆಳಗ್ಗೆ 6.30ರಿಂದ ಮುನಿಗಳ ಮೃತದೇಹದ ಶೋಧಕಾರ್ಯ ಮತ್ತೆ ನಡೆಯಲಿದೆ ಎಂದು ತಿಳಿದುಬಂದಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…