ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು.
ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆಯ ವೇಳೆ ಜೈನಮುನಿಯ ಹತ್ಯೆಯಾಗಿರುವುದು ಬಯಲಾಗಿದೆ.
ತನಿಖೆ ಸಂದರ್ಭದಲ್ಲಿ ರಾತ್ರಿಯಿಡೀ ಇಬ್ಬರು ಆರೋಪಿಗಳು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ನೀಡದೇ ಸತಾಯಿಸಿದ್ದರು.
ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದಿದ್ದೇವೆ ಎಂದಿದ್ದರು. ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದರು. ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ ಪೊಲೀಸರಿಗೆ ಶವ ದೊರೆತಿಲ್ಲ. ಇಂದು ಬೆಳಗ್ಗೆ 6.30ರಿಂದ ಮುನಿಗಳ ಮೃತದೇಹದ ಶೋಧಕಾರ್ಯ ಮತ್ತೆ ನಡೆಯಲಿದೆ ಎಂದು ತಿಳಿದುಬಂದಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…