BREAKING NEWS

ಚಿಕ್ಕೋಡಿ: ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ

ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು.

ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು‌ ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆಯ ವೇಳೆ ಜೈನಮುನಿಯ ಹತ್ಯೆಯಾಗಿರುವುದು ಬಯಲಾಗಿದೆ.

ತನಿಖೆ ಸಂದರ್ಭದಲ್ಲಿ ರಾತ್ರಿಯಿಡೀ ಇಬ್ಬರು ಆರೋಪಿಗಳು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ನೀಡದೇ ಸತಾಯಿಸಿದ್ದರು.

ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದಿದ್ದೇವೆ ಎಂದಿದ್ದರು. ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದರು. ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ ಪೊಲೀಸರಿಗೆ ಶವ ದೊರೆತಿಲ್ಲ. ಇಂದು ಬೆಳಗ್ಗೆ 6.30ರಿಂದ ಮುನಿಗಳ ಮೃತದೇಹದ ಶೋಧಕಾರ್ಯ ಮತ್ತೆ ನಡೆಯಲಿದೆ ಎಂದು ತಿಳಿದುಬಂದಿದೆ.

andolanait

Recent Posts

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

53 seconds ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

52 mins ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

2 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

2 hours ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

2 hours ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

5 hours ago