ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು.
ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆಯ ವೇಳೆ ಜೈನಮುನಿಯ ಹತ್ಯೆಯಾಗಿರುವುದು ಬಯಲಾಗಿದೆ.
ತನಿಖೆ ಸಂದರ್ಭದಲ್ಲಿ ರಾತ್ರಿಯಿಡೀ ಇಬ್ಬರು ಆರೋಪಿಗಳು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ನೀಡದೇ ಸತಾಯಿಸಿದ್ದರು.
ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದಿದ್ದೇವೆ ಎಂದಿದ್ದರು. ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದರು. ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ ಪೊಲೀಸರಿಗೆ ಶವ ದೊರೆತಿಲ್ಲ. ಇಂದು ಬೆಳಗ್ಗೆ 6.30ರಿಂದ ಮುನಿಗಳ ಮೃತದೇಹದ ಶೋಧಕಾರ್ಯ ಮತ್ತೆ ನಡೆಯಲಿದೆ ಎಂದು ತಿಳಿದುಬಂದಿದೆ.
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…
ಹೇಮಂತ್ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…
ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…