ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು.
ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆಯ ವೇಳೆ ಜೈನಮುನಿಯ ಹತ್ಯೆಯಾಗಿರುವುದು ಬಯಲಾಗಿದೆ.
ತನಿಖೆ ಸಂದರ್ಭದಲ್ಲಿ ರಾತ್ರಿಯಿಡೀ ಇಬ್ಬರು ಆರೋಪಿಗಳು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ನೀಡದೇ ಸತಾಯಿಸಿದ್ದರು.
ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದಿದ್ದೇವೆ ಎಂದಿದ್ದರು. ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದರು. ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ ಪೊಲೀಸರಿಗೆ ಶವ ದೊರೆತಿಲ್ಲ. ಇಂದು ಬೆಳಗ್ಗೆ 6.30ರಿಂದ ಮುನಿಗಳ ಮೃತದೇಹದ ಶೋಧಕಾರ್ಯ ಮತ್ತೆ ನಡೆಯಲಿದೆ ಎಂದು ತಿಳಿದುಬಂದಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…